ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಬಹುಬೇಡಿಕೆಯ ಕೋರ್ಸ್‌ಗಳಾದ ಬಿ.ಎಸ್.ಡ್ಬ್ಲೂ ಎಂ.ಎಸ್.ಡ್ಬ್ಲೂ, ಹಾಗೂ ಎಂ.ಸಿ.ಎ. ಕೋರ್ಸ್‌ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದ್ದು, ಇದರ ಜೊತೆಗೆ ಈ ಹಿಂದೆ ಪ್ರವೇಶಾತಿ ನೀಡುತ್ತಿದ್ದ ಕೋರ್ಸ್‌ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಬಿ.ಎ, ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ, ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯು.ಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಅಂತಿಮ ದಿನಾಂಕವಾಗಿರುತ್ತದೆ. ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ವಿವರಗಳು ಲಭ್ಯವಿರುತ್ತದೆ.

ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ಇದ್ದು ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ದಿಲೀಪ್. ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

41 minutes ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago