ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್: 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನ ಗೆದ್ದ ತಾಲೂಕಿನ ಯೋಗ ಪ್ರತಿಭೆಗಳು

ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ​​ಮತ್ತು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪುಟ್ಟಮ್ಮ ಬೆಂಕಿಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್ ನಲ್ಲಿ ತಾಲ್ಲೂಕಿನ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ ನಟರಾಜು ತಿಳಿಸಿದ್ದಾರೆ.

ಬಹುಮಾನ ಗೆದ್ದ ಯೋಗಪಟುಗಳು :-

8 ರಿಂದ 10 ವರ್ಷದ ಬಾಲಕರ ವಿಭಾಗದಲ್ಲಿ ಜೆ.ಸಿ.ಪ್ರಥಮಶೆಟ್ಟಿ ದ್ವಿತೀಯ ಸ್ಥಾನ, ಯಶ್ವಿನ್.ಎಸ್ 5ನೇ ಸ್ಥಾನ.

8 ರಿಂದ 10 ವರ್ಷದ ಬಾಲಕಿಯರ ವಿಭಾಗದಲ್ಲಿ ಎಸ್.ಅಪೂರ್ವ ದ್ವಿತೀಯ ಸ್ಥಾನ, ಎನ್ ಖುಷಿಪ್ರಿಯ ತೃತೀಯ ಸ್ಥಾನ, ಸಾನ್ವಿ.ಎಂ.ರಾಜು 6ನೇ ಸ್ಥಾನ.

10ರಿಂದ 12 ವರ್ಷದ ಬಾಲಕರ ವಿಭಾಗದಲ್ಲಿ ಎಸ್.ಕುಶಲ್ ಪ್ರಥಮ ಸ್ಥಾನ, ನೀರಜ್.ಎಲ್ ತೃತೀಯ ಸ್ಥಾನ, ವೇದಿಕ್ ಶೆಟ್ಟಿ 5ನೇ ಸ್ಥಾನ, ಹಿತೇಶ್.ಎ 6ನೇ ಸ್ಥಾನ.

10ರಿಂದ12 ವರ್ಷದ ಬಾಲಕಿಯರ ವಿಭಾಗದಲ್ಲಿ ಗೌತಮಿ.ಹೆಚ್.ಆರ್. ಪ್ರಥಮ ಸ್ಥಾನ, ಯಶಸ್ವಿನಿ.ಟಿ. ದ್ವಿತೀಯ ಸ್ಥಾನ, ಹಿತಶ್ರೀ ಕೆ.ಎಂ ತೃತೀಯ ಸ್ಥಾನ.

12ರಿಂದ 14 ವರ್ಷದ ಬಾಲಕರ ವಿಭಾಗದಲ್ಲಿ ಶಶಾಂಕ್.ಪಿ.ಎಸ್ ಪ್ರಥಮ ಸ್ಥಾನ, ಕೆ.ಎನ್.ವಿಶ್ವನಾಥ್ ತೃತೀಯ ಸ್ಥಾನ, ಎ.ಸಂಜಯ್ ಕುಮಾರ್ 5ನೇ ಸ್ಥಾನ,

12ರಿಂದ15 ಬಾಲಕಿಯರ ವಿಭಾಗದಲ್ಲಿ ರನಿತಾ.ಆರ್ 5ನೇ ಸ್ಥಾನ.

14ರಿಂಧ16 ವರ್ಷದ ಬಾಲಕೀಯರ ವಿಭಾಗದಲ್ಲಿ ಮಧುಶಾಲಿನಿ ಡಿ.ಎಸ್ 5ನೇಸ್ಥಾನ.

16ರಿಂದ18 ವರ್ಷದ ಯುವತಿಯರ ವಿಭಾಗದಲ್ಲಿ ಎಂ.ಆರ್.ಜಾಹ್ನವಿ, ದ್ವಿತೀಯ ಸ್ಥಾನ.

18ರಿಂದ 21 ವರ್ಶದ ಯುವಕರು ಕೆ.ವಿನಯ್ ಕುಮಾರ್, ಪ್ರಥಮ ಸ್ಥಾನ, ವರಪ್ರಸಾದ್.ವಿ ದ್ವಿತೀಯ ಸ್ಥಾನ, ಚೇತನ್ ರಾಮ್.ಕೆ.ಎಮ್ 6ನೇ ಸ್ಥಾನ,

21ರಿಂದ25 ವರ್ಷದ ಯುವತಿಯರು ಗಾನಶ್ರೀ.ಎ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿರುವ ಯೋಗಪಟುಗಳಿಗೆ ನಿಸರ್ಗ ಯೋಗ ಕೇಂದ್ರದ ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅಭಿನಂದಿಸಿ ಶುಭಹಾರೈಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

18 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago