ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪುಟ್ಟಮ್ಮ ಬೆಂಕಿಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್ ನಲ್ಲಿ ತಾಲ್ಲೂಕಿನ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ ನಟರಾಜು ತಿಳಿಸಿದ್ದಾರೆ.
ಬಹುಮಾನ ಗೆದ್ದ ಯೋಗಪಟುಗಳು :-
8 ರಿಂದ 10 ವರ್ಷದ ಬಾಲಕರ ವಿಭಾಗದಲ್ಲಿ ಜೆ.ಸಿ.ಪ್ರಥಮಶೆಟ್ಟಿ ದ್ವಿತೀಯ ಸ್ಥಾನ, ಯಶ್ವಿನ್.ಎಸ್ 5ನೇ ಸ್ಥಾನ.
8 ರಿಂದ 10 ವರ್ಷದ ಬಾಲಕಿಯರ ವಿಭಾಗದಲ್ಲಿ ಎಸ್.ಅಪೂರ್ವ ದ್ವಿತೀಯ ಸ್ಥಾನ, ಎನ್ ಖುಷಿಪ್ರಿಯ ತೃತೀಯ ಸ್ಥಾನ, ಸಾನ್ವಿ.ಎಂ.ರಾಜು 6ನೇ ಸ್ಥಾನ.
10ರಿಂದ 12 ವರ್ಷದ ಬಾಲಕರ ವಿಭಾಗದಲ್ಲಿ ಎಸ್.ಕುಶಲ್ ಪ್ರಥಮ ಸ್ಥಾನ, ನೀರಜ್.ಎಲ್ ತೃತೀಯ ಸ್ಥಾನ, ವೇದಿಕ್ ಶೆಟ್ಟಿ 5ನೇ ಸ್ಥಾನ, ಹಿತೇಶ್.ಎ 6ನೇ ಸ್ಥಾನ.
10ರಿಂದ12 ವರ್ಷದ ಬಾಲಕಿಯರ ವಿಭಾಗದಲ್ಲಿ ಗೌತಮಿ.ಹೆಚ್.ಆರ್. ಪ್ರಥಮ ಸ್ಥಾನ, ಯಶಸ್ವಿನಿ.ಟಿ. ದ್ವಿತೀಯ ಸ್ಥಾನ, ಹಿತಶ್ರೀ ಕೆ.ಎಂ ತೃತೀಯ ಸ್ಥಾನ.
12ರಿಂದ 14 ವರ್ಷದ ಬಾಲಕರ ವಿಭಾಗದಲ್ಲಿ ಶಶಾಂಕ್.ಪಿ.ಎಸ್ ಪ್ರಥಮ ಸ್ಥಾನ, ಕೆ.ಎನ್.ವಿಶ್ವನಾಥ್ ತೃತೀಯ ಸ್ಥಾನ, ಎ.ಸಂಜಯ್ ಕುಮಾರ್ 5ನೇ ಸ್ಥಾನ,
12ರಿಂದ15 ಬಾಲಕಿಯರ ವಿಭಾಗದಲ್ಲಿ ರನಿತಾ.ಆರ್ 5ನೇ ಸ್ಥಾನ.
14ರಿಂಧ16 ವರ್ಷದ ಬಾಲಕೀಯರ ವಿಭಾಗದಲ್ಲಿ ಮಧುಶಾಲಿನಿ ಡಿ.ಎಸ್ 5ನೇಸ್ಥಾನ.
16ರಿಂದ18 ವರ್ಷದ ಯುವತಿಯರ ವಿಭಾಗದಲ್ಲಿ ಎಂ.ಆರ್.ಜಾಹ್ನವಿ, ದ್ವಿತೀಯ ಸ್ಥಾನ.
18ರಿಂದ 21 ವರ್ಶದ ಯುವಕರು ಕೆ.ವಿನಯ್ ಕುಮಾರ್, ಪ್ರಥಮ ಸ್ಥಾನ, ವರಪ್ರಸಾದ್.ವಿ ದ್ವಿತೀಯ ಸ್ಥಾನ, ಚೇತನ್ ರಾಮ್.ಕೆ.ಎಮ್ 6ನೇ ಸ್ಥಾನ,
21ರಿಂದ25 ವರ್ಷದ ಯುವತಿಯರು ಗಾನಶ್ರೀ.ಎ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿರುವ ಯೋಗಪಟುಗಳಿಗೆ ನಿಸರ್ಗ ಯೋಗ ಕೇಂದ್ರದ ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅಭಿನಂದಿಸಿ ಶುಭಹಾರೈಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…