ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್: 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನ ಗೆದ್ದ ತಾಲೂಕಿನ ಯೋಗ ಪ್ರತಿಭೆಗಳು

ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ​​ಮತ್ತು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪುಟ್ಟಮ್ಮ ಬೆಂಕಿಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್ ನಲ್ಲಿ ತಾಲ್ಲೂಕಿನ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನಗಳನ್ನು ಪಡೆದುಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ ನಟರಾಜು ತಿಳಿಸಿದ್ದಾರೆ.

ಬಹುಮಾನ ಗೆದ್ದ ಯೋಗಪಟುಗಳು :-

8 ರಿಂದ 10 ವರ್ಷದ ಬಾಲಕರ ವಿಭಾಗದಲ್ಲಿ ಜೆ.ಸಿ.ಪ್ರಥಮಶೆಟ್ಟಿ ದ್ವಿತೀಯ ಸ್ಥಾನ, ಯಶ್ವಿನ್.ಎಸ್ 5ನೇ ಸ್ಥಾನ.

8 ರಿಂದ 10 ವರ್ಷದ ಬಾಲಕಿಯರ ವಿಭಾಗದಲ್ಲಿ ಎಸ್.ಅಪೂರ್ವ ದ್ವಿತೀಯ ಸ್ಥಾನ, ಎನ್ ಖುಷಿಪ್ರಿಯ ತೃತೀಯ ಸ್ಥಾನ, ಸಾನ್ವಿ.ಎಂ.ರಾಜು 6ನೇ ಸ್ಥಾನ.

10ರಿಂದ 12 ವರ್ಷದ ಬಾಲಕರ ವಿಭಾಗದಲ್ಲಿ ಎಸ್.ಕುಶಲ್ ಪ್ರಥಮ ಸ್ಥಾನ, ನೀರಜ್.ಎಲ್ ತೃತೀಯ ಸ್ಥಾನ, ವೇದಿಕ್ ಶೆಟ್ಟಿ 5ನೇ ಸ್ಥಾನ, ಹಿತೇಶ್.ಎ 6ನೇ ಸ್ಥಾನ.

10ರಿಂದ12 ವರ್ಷದ ಬಾಲಕಿಯರ ವಿಭಾಗದಲ್ಲಿ ಗೌತಮಿ.ಹೆಚ್.ಆರ್. ಪ್ರಥಮ ಸ್ಥಾನ, ಯಶಸ್ವಿನಿ.ಟಿ. ದ್ವಿತೀಯ ಸ್ಥಾನ, ಹಿತಶ್ರೀ ಕೆ.ಎಂ ತೃತೀಯ ಸ್ಥಾನ.

12ರಿಂದ 14 ವರ್ಷದ ಬಾಲಕರ ವಿಭಾಗದಲ್ಲಿ ಶಶಾಂಕ್.ಪಿ.ಎಸ್ ಪ್ರಥಮ ಸ್ಥಾನ, ಕೆ.ಎನ್.ವಿಶ್ವನಾಥ್ ತೃತೀಯ ಸ್ಥಾನ, ಎ.ಸಂಜಯ್ ಕುಮಾರ್ 5ನೇ ಸ್ಥಾನ,

12ರಿಂದ15 ಬಾಲಕಿಯರ ವಿಭಾಗದಲ್ಲಿ ರನಿತಾ.ಆರ್ 5ನೇ ಸ್ಥಾನ.

14ರಿಂಧ16 ವರ್ಷದ ಬಾಲಕೀಯರ ವಿಭಾಗದಲ್ಲಿ ಮಧುಶಾಲಿನಿ ಡಿ.ಎಸ್ 5ನೇಸ್ಥಾನ.

16ರಿಂದ18 ವರ್ಷದ ಯುವತಿಯರ ವಿಭಾಗದಲ್ಲಿ ಎಂ.ಆರ್.ಜಾಹ್ನವಿ, ದ್ವಿತೀಯ ಸ್ಥಾನ.

18ರಿಂದ 21 ವರ್ಶದ ಯುವಕರು ಕೆ.ವಿನಯ್ ಕುಮಾರ್, ಪ್ರಥಮ ಸ್ಥಾನ, ವರಪ್ರಸಾದ್.ವಿ ದ್ವಿತೀಯ ಸ್ಥಾನ, ಚೇತನ್ ರಾಮ್.ಕೆ.ಎಮ್ 6ನೇ ಸ್ಥಾನ,

21ರಿಂದ25 ವರ್ಷದ ಯುವತಿಯರು ಗಾನಶ್ರೀ.ಎ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿರುವ ಯೋಗಪಟುಗಳಿಗೆ ನಿಸರ್ಗ ಯೋಗ ಕೇಂದ್ರದ ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅಭಿನಂದಿಸಿ ಶುಭಹಾರೈಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago