ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ ಮುಖ್ಯಾಂಶಗಳು:

– ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಮುಷ್ಕರವನ್ನು ವಾಪಾಸು ಪಡೆಯಬೇಕು.

– 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.

– ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು.ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.

– ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್‌ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ.

– ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು.
– ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಅಧ್ಯಕ್ಷ ರಾಜುಕಾಗೆ, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

28 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago