ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ ಮುಖ್ಯಾಂಶಗಳು:

– ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಮುಷ್ಕರವನ್ನು ವಾಪಾಸು ಪಡೆಯಬೇಕು.

– 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.

– ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು.ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು.

– ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್‌ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ.

– ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು.
– ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಅಧ್ಯಕ್ಷ ರಾಜುಕಾಗೆ, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago