ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಹಾಗೂ ಕರ್ನಾಟಕ ರಾಜ್ಯ ವನ್ನಿಕುಲ ಕ್ಷತ್ರಿಯ (ತಿಗಳರ) ಸಂಘದ ನಿರ್ದೇಶಕ ಮಂಜುನಾಥ್ ಕೊನಘಟ್ಟ ಮತ್ತು ರಾಮಣ್ಣ ಮನೆಗೆ ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ಬಲಪಡಿಸಬೇಕು.ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕಾಗಿ ನಿರಂತರ ದುಡಿದಿರುವ ಕಾರ್ಯಕರ್ತರು ಸಾಕಷ್ಟು ಜನರಿದ್ದು, ಕಾರ್ಯಕರ್ತರ ಧ್ವನಿಯಾಗಿ ರಾಜ್ಯ ಜೆಡಿಎಸ್ ಕರ್ತವ್ಯ ನಿರ್ವಹಿಸಲಿದೆ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಪಕ್ಷ ನಿಷ್ಠೆಯಿಂದ ಶ್ರಮಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವನ್ನಿಕುಲ ಕ್ಷತ್ರಿಯ ತಿಗಳರ ಸಂಘದ ವತಿಯಿಂದ ಕರಗ ದೇವತೆಯ ನೆನಪಿನ ಕಾಣಿಕೆ ನೀಡಿ ನಿಖಿಲ್ ಕುಮಾರಸ್ವಾಮಿಯವರನ್ನು ಗೌರವಿಸಲಾಯಿತು.
ಈ ವೇಳೆ ದೇವನಹಳ್ಳಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ ವಿ ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ, ರಾಜ್ಯ ಪ್ರಮುಖರಾದ ಡಾ.ವಿಜಿ ಕುಮಾರ್, ಮುಖಂಡರಾದ ಜಿ ಸತ್ಯನಾರಾಯಣ ಟಿಎಪಿಎಂಸಿಯ ನಿರ್ದೇಶಕ ಅಂಜನ್ ಗೌಡ, ಲಕ್ಷ್ಮಿ ನಾಗೇಶ್, ಆನಂದ್ ಕೊನಘಟ್ಟ, ಲಿಂಗನಹಳ್ಳಿ ಆನಂದ್, ಮಾಜಿ ನಗರಸಭೆ ಸದಸ್ಯ ಕೆಂಪರಾಜು,ನಗರಸಭೆ ಸದಸ್ಯರಾದ ಪ್ರಭ ನಾಗರಾಜು, ಕರಗ ಪೂಜಾರಿ ನಾಗರಾಜ್ ಸೇರಿದಂತೆ ಹಿರಿಯ ಮುಖಂಡರು ಮತ್ತು ಕೊನಘಟ್ಟ ಪಂಚಾಯಿತಿಯ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…