ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಹಾಗೂ ಕರ್ನಾಟಕ ರಾಜ್ಯ ವನ್ನಿಕುಲ ಕ್ಷತ್ರಿಯ (ತಿಗಳರ) ಸಂಘದ ನಿರ್ದೇಶಕ ಮಂಜುನಾಥ್ ಕೊನಘಟ್ಟ ಮತ್ತು ರಾಮಣ್ಣ ಮನೆಗೆ ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ಬಲಪಡಿಸಬೇಕು.ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕಾಗಿ ನಿರಂತರ ದುಡಿದಿರುವ ಕಾರ್ಯಕರ್ತರು ಸಾಕಷ್ಟು ಜನರಿದ್ದು, ಕಾರ್ಯಕರ್ತರ ಧ್ವನಿಯಾಗಿ ರಾಜ್ಯ ಜೆಡಿಎಸ್ ಕರ್ತವ್ಯ ನಿರ್ವಹಿಸಲಿದೆ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಪಕ್ಷ ನಿಷ್ಠೆಯಿಂದ ಶ್ರಮಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವನ್ನಿಕುಲ ಕ್ಷತ್ರಿಯ ತಿಗಳರ ಸಂಘದ ವತಿಯಿಂದ ಕರಗ ದೇವತೆಯ ನೆನಪಿನ ಕಾಣಿಕೆ ನೀಡಿ ನಿಖಿಲ್ ಕುಮಾರಸ್ವಾಮಿಯವರನ್ನು ಗೌರವಿಸಲಾಯಿತು.
ಈ ವೇಳೆ ದೇವನಹಳ್ಳಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ ವಿ ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ, ರಾಜ್ಯ ಪ್ರಮುಖರಾದ ಡಾ.ವಿಜಿ ಕುಮಾರ್, ಮುಖಂಡರಾದ ಜಿ ಸತ್ಯನಾರಾಯಣ ಟಿಎಪಿಎಂಸಿಯ ನಿರ್ದೇಶಕ ಅಂಜನ್ ಗೌಡ, ಲಕ್ಷ್ಮಿ ನಾಗೇಶ್, ಆನಂದ್ ಕೊನಘಟ್ಟ, ಲಿಂಗನಹಳ್ಳಿ ಆನಂದ್, ಮಾಜಿ ನಗರಸಭೆ ಸದಸ್ಯ ಕೆಂಪರಾಜು,ನಗರಸಭೆ ಸದಸ್ಯರಾದ ಪ್ರಭ ನಾಗರಾಜು, ಕರಗ ಪೂಜಾರಿ ನಾಗರಾಜ್ ಸೇರಿದಂತೆ ಹಿರಿಯ ಮುಖಂಡರು ಮತ್ತು ಕೊನಘಟ್ಟ ಪಂಚಾಯಿತಿಯ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…