ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಹಾಗೂ ಕರ್ನಾಟಕ ರಾಜ್ಯ ವನ್ನಿಕುಲ ಕ್ಷತ್ರಿಯ (ತಿಗಳರ) ಸಂಘದ ನಿರ್ದೇಶಕ ಮಂಜುನಾಥ್ ಕೊನಘಟ್ಟ ಮತ್ತು ರಾಮಣ್ಣ ಮನೆಗೆ ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ಬಲಪಡಿಸಬೇಕು.ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕಾಗಿ ನಿರಂತರ ದುಡಿದಿರುವ ಕಾರ್ಯಕರ್ತರು ಸಾಕಷ್ಟು ಜನರಿದ್ದು, ಕಾರ್ಯಕರ್ತರ ಧ್ವನಿಯಾಗಿ ರಾಜ್ಯ ಜೆಡಿಎಸ್ ಕರ್ತವ್ಯ ನಿರ್ವಹಿಸಲಿದೆ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಪಕ್ಷ ನಿಷ್ಠೆಯಿಂದ ಶ್ರಮಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವನ್ನಿಕುಲ ಕ್ಷತ್ರಿಯ ತಿಗಳರ ಸಂಘದ ವತಿಯಿಂದ ಕರಗ ದೇವತೆಯ ನೆನಪಿನ ಕಾಣಿಕೆ ನೀಡಿ ನಿಖಿಲ್ ಕುಮಾರಸ್ವಾಮಿಯವರನ್ನು ಗೌರವಿಸಲಾಯಿತು.
ಈ ವೇಳೆ ದೇವನಹಳ್ಳಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ ವಿ ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ, ರಾಜ್ಯ ಪ್ರಮುಖರಾದ ಡಾ.ವಿಜಿ ಕುಮಾರ್, ಮುಖಂಡರಾದ ಜಿ ಸತ್ಯನಾರಾಯಣ ಟಿಎಪಿಎಂಸಿಯ ನಿರ್ದೇಶಕ ಅಂಜನ್ ಗೌಡ, ಲಕ್ಷ್ಮಿ ನಾಗೇಶ್, ಆನಂದ್ ಕೊನಘಟ್ಟ, ಲಿಂಗನಹಳ್ಳಿ ಆನಂದ್, ಮಾಜಿ ನಗರಸಭೆ ಸದಸ್ಯ ಕೆಂಪರಾಜು,ನಗರಸಭೆ ಸದಸ್ಯರಾದ ಪ್ರಭ ನಾಗರಾಜು, ಕರಗ ಪೂಜಾರಿ ನಾಗರಾಜ್ ಸೇರಿದಂತೆ ಹಿರಿಯ ಮುಖಂಡರು ಮತ್ತು ಕೊನಘಟ್ಟ ಪಂಚಾಯಿತಿಯ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…