Categories: ಕೋಲಾರ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಅಸ್ತಿತ್ವಕ್ಕೆ- ಎಸ್ ಚೌಡಪ್ಪ

ಕೋಲಾರ: ಶಿಕ್ಷಣ ಇಲಾಖೆಯ ವಿವಿಧ ವಿಭಾಗಗಳಲ್ಲಿನ ಶಿಕ್ಷಕರು, ಕಚೇರಿಯ ಸಿಬ್ಬಂದಿ, ಅಧಿಕಾರಿ ವರ್ಗ, ಶಾಲಾ ಶಿಕ್ಷಣ ಇಲಾಖೆಯ ವಿವಿಧ ವೃಂದಗಳಲ್ಲಿ ಖಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ವಸತಿ ಶಿಕ್ಷಣ ಸಂಸ್ಥೆಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕಛೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಖಾಯಂ ನೌಕರರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ರಾಜ್ಯ ಮಟ್ಟದಲ್ಲಿ ಶಿಕ್ಷಣ ಇಲಾಖೆಯ ನೌಕರರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ನೂತನ ರಾಜ್ಯ ಅಧ್ಯಕ್ಷ ಎಸ್ ಚೌಡಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಶಿಕ್ಷಣ ಇಲಾಖೆಯ ಎಲ್ಲಾ ಖಾಯಂ ನೌಕರರನ್ನು ಒಂದೇ ವೇದಿಕೆಗೆ ತಂದು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಸೂಕ್ತವಾದ ಮಾರ್ಗವಾಗಿದೆ ಅನೇಕ ಶಿಕ್ಷಣ ತಜ್ಞರು, ಹಿರಿಯರು, ಮತ್ತು ವೃತ್ತಿ ಬಾಂಧವರ ಅಭಿಪ್ರಾಯದಂತೆ ಒಂದು ವರ್ಷದಿಂದ ಅನೇಕ ಸಭೆಗಳು ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ಬೆಂಗಳೂರಿನಲ್ಲಿ ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಶಿಕ್ಷಣ ಇಲಾಖೆಯ ನೌಕರರು ಸಭೆ ಮಾಡಿ ಸಭೆಯಲ್ಲಿ ಒಮ್ಮತದ ಅಭಿಪ್ರಾಯದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಖಾಯಂ ನೌಕರರನ್ನು ಒಳಗೊಂಡಂತೆ ನೂತನ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಸಂಘದ ಬೈಲಾದಂತೆ ಸಂಘದಲ್ಲಿ ಮಹಿಳಾ ನೌಕರರಿಗೂ 30% ಪ್ರಾತಿನಿಧ್ಯ ನೀಡಲಾಗಿದೆ ಎಂದು ಎಸ್.ಚೌಡಪ್ಪ ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಕೇಂದ್ರ ಸಂಘವು ನಿರ್ದಿಷ್ಟವಾದ ಬೈಲಾದೊಂದಿಗೆ ರಾಜ್ಯ ಸಮಿತಿ ರಚನೆಗೊಂಡಿದ್ದು ರಾಜ್ಯ ಸಮಿತಿಯ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಶಾಖೆಗಳನ್ನು ಹಾಗೂ ತಾಲೂಕು ಮಟ್ಟದಲ್ಲಿ ತಾಲೂಕು ಶಾಖೆಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಯಿತು ಈ ಸಂಘವು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಮಾಡುತ್ತಿರುವ ಪ್ರತಿಯೊಬ್ಬರಿಗೂ ಮಾಹಿತಿ ಕಣಜವಾಗಲಿದೆ ಇಲಾಖಾ ಆದೇಶಗಳು ನಿತ್ಯ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವಿಚಾರಗಳನ್ನು ನೀಡಿ ಶಿಕ್ಷಣ ನೀಡುವವರ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆಯಾಗಲಿದೆ. ಸಂಘದ ವತಿಯಿಂದಲ್ಲೇ ಶಿಕ್ಷಕರಿಗೆ ಸಿಬ್ಬಂದಿಗೆ ಹಾಗೂ ಅಧಿಕಾರಿಗಳಿಗೆ ಉಪಯುಕ್ತವಾಗುವ ಮಾಹಿತಿಯೊಂದಿಗೆ ಸಿದ್ದಪಡಿಸಿ ನೀಡಲಾಗುತ್ತದೆ ಎಂದರು.

ಸಂಘಕ್ಕೆ ರಾಜ್ಯದ್ಯಂತಹ ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದು ಬಹುತೇಕ ನೌಕರರ ನಿರೀಕ್ಷೆಯ ಮೇರೆಗೆ ರಾಜ್ಯಾದ್ಯಂತ ಸಂಘಟನೆಯನ್ನು ಮಾಡಿ ಸರ್ಕಾರಿ ನೌಕರರ ಸಂಘ ಹಾಗೂ ಇಲಾಖೆಯ ವಿವಿಧ ವೃಂದ ಸಂಘಗಳೊಂದಿಗೆ ಸಮನ್ವಯತೆ ಕಾಪಾಡಿಕೊಂಡು ಶಿಕ್ಷಣ ಇಲಾಖೆಯ ನೌಕರರ ಒಗ್ಗಟ್ಟಿನಿಂದ
ಶಿಕ್ಷಣ ನೀಡುತ್ತಿರುವವರಲ್ಲಿ ಗೊಂದಲಗಳನ್ನು ನಿವಾರಿಸಲಾಗುತ್ತದೆ ಪ್ರಾಥಮಿಕ ಶಾಲೆಯ ಶಿಕ್ಷಕರಿಂದ ಪ್ರಾರಂಭಗೊಂಡು ಆಯುಕ್ತರ ಕಚೇರಿ ತನಕ ಎಲ್ಲಾ ನೌಕರ, ಶಿಕ್ಷಕ ಉಪನ್ಯಾಸಕರನ್ನು ಒಂದಡೆ ಸೇರಿಸಲು ಹಲವು ಪ್ರಾಯೋಗಿಕ ವಿಚಾರಗಳನ್ನು ಕೈಗೊಳ್ಳಲಾಗಿದೆ ಹಲವು ಹಂತದ ಚರ್ಚೆಗಳು ವಿಮರ್ಶೆಗಳು ನಡೆದಿವೆ ರಾಜ್ಯಮಟ್ಟದ ವಿಚಾರವಂತರ ಜ್ಞಾನವಂತರ ಸಾಂಗಿತ್ಯ ಹಾಗೂ ಮಾರ್ಗದರ್ಶನ ನೈತಿಕ ಬೆಂಬಲ ಇರುವುದರಿಂದ ಸಂಘಟನೆಯನ್ನು ಸ್ಥಿರಸ್ಥಾಯಿಗೊಳಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘವನ್ನು ರಚಿಸಿ ಸದರಿ ಸಂಘಕ್ಕೆ ಸೂಕ್ತವಾದ ಬೈಲಾವನ್ನು ರಚಿಸಿ ಬೈಲಾ ನಿಯಮದಂತೆ ನೂತನ ರಾಜ್ಯಾಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಎಸ್.ಚೌಡಪ್ಪ, ಕಾರ್ಯಾಧ್ಯಕ್ಷರಾಗಿ ಮೈಸೂರು ಕಿರಣ್ ರಘುಪತಿ, ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ದಕ್ಷಿಣ ರವಿ ಪ್ರಕಾಶ್ ಎಂ.ಎಸ್, ಖಜಾಂಚಿಯಾಗಿ ಬಾಗಲಕೋಟೆ ಸಂತೋಷ್, ಎಸ್ ಪಟ್ಟಣಶೆಟ್ಟಿ ಹಿರಿಯ ಉಪಾಧ್ಯಕ್ಷರಾಗಿ ಕಲಬುರ್ಗಿ ಈರನಗೌಡ ಕೆ ಪಾಟೀಲ್, ಮಹಿಳಾ ಹಿರಿಯ ಉಪಾಧ್ಯಕ್ಷರಾಗಿ ಕೋಲಾರ ಕವಿತ ಬಿ.ಎ, ಉಪಾಧ್ಯಕ್ಷರಾಗಿ ಉಡುಪಿ ರಾಜಾರಾಮ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಬೆಂಗಳೂರು ಆಯುಕ್ತರ ಕಚೆರಿಯ ನವೀನ್ ಕುಮಾರ್, ದಕ್ಷಿಣ ಕನ್ನಡ ತ್ಯಾಗಮ್ ಹರೇಕಳ, ಜಂಟಿ ಕಾರ್ಯದರ್ಶಿಯಾಗಿ ದಾವಣಗೆರೆ ಶೈಲಾ ಎಸ್, ಸಂಘಟನಾ ಕಾರ್ಯದರ್ಶಿಯಾಗಿ ಕೋಲಾರ ಜಿಲ್ಲೆ ಮನೋಹರ್ ಆರ್ ರವರನ್ನು ಪ್ರಾದೇಶಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದಡಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿ ಉಳಿದ ಪದಾಧಿಕಾರಿಗಳನ್ನು ಬೈಲಾ ನಿಯಮಾನುಸಾರ ರಾಜ್ಯಾಧ್ಯಕ್ಷರು ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಿತು.

ಸಭೆಯಲ್ಲಿ ಬಿ.ಎ ಕವಿತ, ಮನೋಹರ್, ವೇಣುಗೋಪಾಲ್, ಮುನಿರಾಮಯ್ಯ ಬಿ.ಎಂ, ಮಂಜುಳ, ಜಯಂತಿ, ಸತೀಶ್ ಕುಮಾರ್, ಕೃಷ್ಣಪ್ಪ, ನಾಗರಾಜ್, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

7 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago