Categories: ಕೋಲಾರ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಅಸ್ತಿತ್ವಕ್ಕೆ- ಎಸ್ ಚೌಡಪ್ಪ

ಕೋಲಾರ: ಶಿಕ್ಷಣ ಇಲಾಖೆಯ ವಿವಿಧ ವಿಭಾಗಗಳಲ್ಲಿನ ಶಿಕ್ಷಕರು, ಕಚೇರಿಯ ಸಿಬ್ಬಂದಿ, ಅಧಿಕಾರಿ ವರ್ಗ, ಶಾಲಾ ಶಿಕ್ಷಣ ಇಲಾಖೆಯ ವಿವಿಧ ವೃಂದಗಳಲ್ಲಿ ಖಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ವಸತಿ ಶಿಕ್ಷಣ ಸಂಸ್ಥೆಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕಛೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಖಾಯಂ ನೌಕರರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ರಾಜ್ಯ ಮಟ್ಟದಲ್ಲಿ ಶಿಕ್ಷಣ ಇಲಾಖೆಯ ನೌಕರರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ನೂತನ ರಾಜ್ಯ ಅಧ್ಯಕ್ಷ ಎಸ್ ಚೌಡಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಶಿಕ್ಷಣ ಇಲಾಖೆಯ ಎಲ್ಲಾ ಖಾಯಂ ನೌಕರರನ್ನು ಒಂದೇ ವೇದಿಕೆಗೆ ತಂದು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಸೂಕ್ತವಾದ ಮಾರ್ಗವಾಗಿದೆ ಅನೇಕ ಶಿಕ್ಷಣ ತಜ್ಞರು, ಹಿರಿಯರು, ಮತ್ತು ವೃತ್ತಿ ಬಾಂಧವರ ಅಭಿಪ್ರಾಯದಂತೆ ಒಂದು ವರ್ಷದಿಂದ ಅನೇಕ ಸಭೆಗಳು ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ಬೆಂಗಳೂರಿನಲ್ಲಿ ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಶಿಕ್ಷಣ ಇಲಾಖೆಯ ನೌಕರರು ಸಭೆ ಮಾಡಿ ಸಭೆಯಲ್ಲಿ ಒಮ್ಮತದ ಅಭಿಪ್ರಾಯದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಖಾಯಂ ನೌಕರರನ್ನು ಒಳಗೊಂಡಂತೆ ನೂತನ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಸಂಘದ ಬೈಲಾದಂತೆ ಸಂಘದಲ್ಲಿ ಮಹಿಳಾ ನೌಕರರಿಗೂ 30% ಪ್ರಾತಿನಿಧ್ಯ ನೀಡಲಾಗಿದೆ ಎಂದು ಎಸ್.ಚೌಡಪ್ಪ ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಕೇಂದ್ರ ಸಂಘವು ನಿರ್ದಿಷ್ಟವಾದ ಬೈಲಾದೊಂದಿಗೆ ರಾಜ್ಯ ಸಮಿತಿ ರಚನೆಗೊಂಡಿದ್ದು ರಾಜ್ಯ ಸಮಿತಿಯ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಶಾಖೆಗಳನ್ನು ಹಾಗೂ ತಾಲೂಕು ಮಟ್ಟದಲ್ಲಿ ತಾಲೂಕು ಶಾಖೆಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಯಿತು ಈ ಸಂಘವು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಮಾಡುತ್ತಿರುವ ಪ್ರತಿಯೊಬ್ಬರಿಗೂ ಮಾಹಿತಿ ಕಣಜವಾಗಲಿದೆ ಇಲಾಖಾ ಆದೇಶಗಳು ನಿತ್ಯ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವಿಚಾರಗಳನ್ನು ನೀಡಿ ಶಿಕ್ಷಣ ನೀಡುವವರ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆಯಾಗಲಿದೆ. ಸಂಘದ ವತಿಯಿಂದಲ್ಲೇ ಶಿಕ್ಷಕರಿಗೆ ಸಿಬ್ಬಂದಿಗೆ ಹಾಗೂ ಅಧಿಕಾರಿಗಳಿಗೆ ಉಪಯುಕ್ತವಾಗುವ ಮಾಹಿತಿಯೊಂದಿಗೆ ಸಿದ್ದಪಡಿಸಿ ನೀಡಲಾಗುತ್ತದೆ ಎಂದರು.

ಸಂಘಕ್ಕೆ ರಾಜ್ಯದ್ಯಂತಹ ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದು ಬಹುತೇಕ ನೌಕರರ ನಿರೀಕ್ಷೆಯ ಮೇರೆಗೆ ರಾಜ್ಯಾದ್ಯಂತ ಸಂಘಟನೆಯನ್ನು ಮಾಡಿ ಸರ್ಕಾರಿ ನೌಕರರ ಸಂಘ ಹಾಗೂ ಇಲಾಖೆಯ ವಿವಿಧ ವೃಂದ ಸಂಘಗಳೊಂದಿಗೆ ಸಮನ್ವಯತೆ ಕಾಪಾಡಿಕೊಂಡು ಶಿಕ್ಷಣ ಇಲಾಖೆಯ ನೌಕರರ ಒಗ್ಗಟ್ಟಿನಿಂದ
ಶಿಕ್ಷಣ ನೀಡುತ್ತಿರುವವರಲ್ಲಿ ಗೊಂದಲಗಳನ್ನು ನಿವಾರಿಸಲಾಗುತ್ತದೆ ಪ್ರಾಥಮಿಕ ಶಾಲೆಯ ಶಿಕ್ಷಕರಿಂದ ಪ್ರಾರಂಭಗೊಂಡು ಆಯುಕ್ತರ ಕಚೇರಿ ತನಕ ಎಲ್ಲಾ ನೌಕರ, ಶಿಕ್ಷಕ ಉಪನ್ಯಾಸಕರನ್ನು ಒಂದಡೆ ಸೇರಿಸಲು ಹಲವು ಪ್ರಾಯೋಗಿಕ ವಿಚಾರಗಳನ್ನು ಕೈಗೊಳ್ಳಲಾಗಿದೆ ಹಲವು ಹಂತದ ಚರ್ಚೆಗಳು ವಿಮರ್ಶೆಗಳು ನಡೆದಿವೆ ರಾಜ್ಯಮಟ್ಟದ ವಿಚಾರವಂತರ ಜ್ಞಾನವಂತರ ಸಾಂಗಿತ್ಯ ಹಾಗೂ ಮಾರ್ಗದರ್ಶನ ನೈತಿಕ ಬೆಂಬಲ ಇರುವುದರಿಂದ ಸಂಘಟನೆಯನ್ನು ಸ್ಥಿರಸ್ಥಾಯಿಗೊಳಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘವನ್ನು ರಚಿಸಿ ಸದರಿ ಸಂಘಕ್ಕೆ ಸೂಕ್ತವಾದ ಬೈಲಾವನ್ನು ರಚಿಸಿ ಬೈಲಾ ನಿಯಮದಂತೆ ನೂತನ ರಾಜ್ಯಾಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಎಸ್.ಚೌಡಪ್ಪ, ಕಾರ್ಯಾಧ್ಯಕ್ಷರಾಗಿ ಮೈಸೂರು ಕಿರಣ್ ರಘುಪತಿ, ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ದಕ್ಷಿಣ ರವಿ ಪ್ರಕಾಶ್ ಎಂ.ಎಸ್, ಖಜಾಂಚಿಯಾಗಿ ಬಾಗಲಕೋಟೆ ಸಂತೋಷ್, ಎಸ್ ಪಟ್ಟಣಶೆಟ್ಟಿ ಹಿರಿಯ ಉಪಾಧ್ಯಕ್ಷರಾಗಿ ಕಲಬುರ್ಗಿ ಈರನಗೌಡ ಕೆ ಪಾಟೀಲ್, ಮಹಿಳಾ ಹಿರಿಯ ಉಪಾಧ್ಯಕ್ಷರಾಗಿ ಕೋಲಾರ ಕವಿತ ಬಿ.ಎ, ಉಪಾಧ್ಯಕ್ಷರಾಗಿ ಉಡುಪಿ ರಾಜಾರಾಮ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಬೆಂಗಳೂರು ಆಯುಕ್ತರ ಕಚೆರಿಯ ನವೀನ್ ಕುಮಾರ್, ದಕ್ಷಿಣ ಕನ್ನಡ ತ್ಯಾಗಮ್ ಹರೇಕಳ, ಜಂಟಿ ಕಾರ್ಯದರ್ಶಿಯಾಗಿ ದಾವಣಗೆರೆ ಶೈಲಾ ಎಸ್, ಸಂಘಟನಾ ಕಾರ್ಯದರ್ಶಿಯಾಗಿ ಕೋಲಾರ ಜಿಲ್ಲೆ ಮನೋಹರ್ ಆರ್ ರವರನ್ನು ಪ್ರಾದೇಶಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದಡಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿ ಉಳಿದ ಪದಾಧಿಕಾರಿಗಳನ್ನು ಬೈಲಾ ನಿಯಮಾನುಸಾರ ರಾಜ್ಯಾಧ್ಯಕ್ಷರು ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಿತು.

ಸಭೆಯಲ್ಲಿ ಬಿ.ಎ ಕವಿತ, ಮನೋಹರ್, ವೇಣುಗೋಪಾಲ್, ಮುನಿರಾಮಯ್ಯ ಬಿ.ಎಂ, ಮಂಜುಳ, ಜಯಂತಿ, ಸತೀಶ್ ಕುಮಾರ್, ಕೃಷ್ಣಪ್ಪ, ನಾಗರಾಜ್, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

3 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

13 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

15 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

20 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago