ಅರ್ಹ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು 2023 ರ ಅಕ್ಟೋಬರ್ 31 ರಿಂದ ನವೆಂಬರ್ 31 ರವರೆಗೆ ಸಲ್ಲಿಸಬಹುದಾಗಿದೆ.
ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ 2,00,000 ಮಿತಿಯೊಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಆನ್ಲೈನ್ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ. ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ಬುಕ್ ಪ್ರತಿ. ಇಚ್ಛಿಸುವ ಯೋಜನೆಗಳ ಯೋಜನಾ ವರದಿ. ವಾಹನದ ಪರವಾನಗಿ.
ಅರ್ಹ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 080-29781036 ಹಾಗೂ ನಿಗಮದ ವೆಬ್ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…