ಅರ್ಹ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು 2023 ರ ಅಕ್ಟೋಬರ್ 31 ರಿಂದ ನವೆಂಬರ್ 31 ರವರೆಗೆ ಸಲ್ಲಿಸಬಹುದಾಗಿದೆ.
ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ 2,00,000 ಮಿತಿಯೊಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಆನ್ಲೈನ್ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ. ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ಬುಕ್ ಪ್ರತಿ. ಇಚ್ಛಿಸುವ ಯೋಜನೆಗಳ ಯೋಜನಾ ವರದಿ. ವಾಹನದ ಪರವಾನಗಿ.
ಅರ್ಹ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 080-29781036 ಹಾಗೂ ನಿಗಮದ ವೆಬ್ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…