ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಕರೆ

2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.

ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆಗಳಿಗೆ ವಿಮೆ ನೋಂದಾಯಿಸಲು ಅವಕಾಶವಿದೆ, ಆದ್ದರಿಂದ ಮಾವು ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯುವ ರೈತರು ಜುಲೈ 31 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದರು.

ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

2 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

3 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

4 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

5 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

5 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

7 hours ago