2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.
ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.
ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…