ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಕರೆ

2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.

ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆಗಳಿಗೆ ವಿಮೆ ನೋಂದಾಯಿಸಲು ಅವಕಾಶವಿದೆ, ಆದ್ದರಿಂದ ಮಾವು ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯುವ ರೈತರು ಜುಲೈ 31 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದರು.

ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago