2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.
ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.
ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…