ಸಮಾಜ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು 2023-24ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ: 20-05-2023 ರಂದು ಕೊನೆಯ ದಿನಾಂಕವಾಗಿರುತ್ತದೆ. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ ಮತ್ತು ವಸತಿ, ಲೇಖನ ಸಾಮಾಗ್ರಿ, ಪಠ್ಯ ಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿ.ಇ,ಟಿ ಮತ್ತು ನೀಟ್ ಪರೀಕ್ಷೆಗಳಿಗೆ ತರಬೇತಿ ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳು:
1) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲ್ಲೂಕು
2) ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
3) ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಬೊಮ್ಮವಾರ, ದೇವನಹಳ್ಳಿ ತಾಲ್ಲೂಕು.
ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರುಗಳಾದ ನಾಗರಾಜ್.ಕೆ.ವಿ, -9880322844, ಕಿರಣ್ ಕುಮಾರ್.ಎನ್-9110256424 ಮತ್ತು ನಾಗರತ್ನಮ್ಮ,ಪಿ-8105526933 ಹಾಗೂ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…