ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರ ಸಂಬಂಧ ಫೆಬ್ರವರಿ 16ರಂದು ಜಿಲ್ಲೆಯಲ್ಲಿ ಮತದಾನ ನಡೆಯುವ 6 ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ವಿವಿಧ ಆಸೆ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆ ಸೇರಿದಂತೆ ಇತರೆ ಚಟುವಟಿಕೆಗಳನ್ನ ಇದನ್ನು ತಡೆಗಟ್ಟುವ ಹಾಗೂ ಮತದಾನದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿನ 6 ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಗಳು ಮತದಾನ ದಿನದಂದು ತಪ್ಪದೆ ಬೆಳಗ್ಗೆ 7:00 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ, ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು. ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿಯವರು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago