ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರ ಸಂಬಂಧ ಫೆಬ್ರವರಿ 16ರಂದು ಜಿಲ್ಲೆಯಲ್ಲಿ ಮತದಾನ ನಡೆಯುವ 6 ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ವಿವಿಧ ಆಸೆ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆ ಸೇರಿದಂತೆ ಇತರೆ ಚಟುವಟಿಕೆಗಳನ್ನ ಇದನ್ನು ತಡೆಗಟ್ಟುವ ಹಾಗೂ ಮತದಾನದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿನ 6 ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಗಳು ಮತದಾನ ದಿನದಂದು ತಪ್ಪದೆ ಬೆಳಗ್ಗೆ 7:00 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ, ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು. ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿಯವರು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago