ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಡಾ.ಎನ್ ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರ ಸಂಬಂಧ ಫೆಬ್ರವರಿ 16ರಂದು ಜಿಲ್ಲೆಯಲ್ಲಿ ಮತದಾನ ನಡೆಯುವ 6 ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ವಿವಿಧ ಆಸೆ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆ ಸೇರಿದಂತೆ ಇತರೆ ಚಟುವಟಿಕೆಗಳನ್ನ ಇದನ್ನು ತಡೆಗಟ್ಟುವ ಹಾಗೂ ಮತದಾನದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿನ 6 ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಗಳು ಮತದಾನ ದಿನದಂದು ತಪ್ಪದೆ ಬೆಳಗ್ಗೆ 7:00 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ, ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು. ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿಯವರು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

13 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago