ಕರ್ನಾಟಕ ಸೇರಿದಂತೆ 5 ರಾಜ್ಯಗಳ ಹೈಕೋರ್ಟ್ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ನ ಕೊಲಿಜಿಯಂ ಮೇ ತಿಂಗಳಲ್ಲಿ ಈ ನೇಮಕಾತಿಗಳನ್ನು ಶಿಫಾರಸು ಮಾಡಿತ್ತು. ಅದರಂತೆ, ನ್ಯಾಯಮೂರ್ತಿಗಳ ನೇಮಕ ನಡೆದಿದೆ.
ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ವಿಭು ಬಕ್ರು ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ದೆಹಲಿ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಸಂಜೀವ್ ಸಚ್ದೇವ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್ನ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರನ್ನು ಗೌಹಾಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್ನ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಹಿಮಾಚಲ ಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್ ಅವರನ್ನು ಜಾರ್ಖಂಡ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…