ಕಲಬುರಗಿಯಲ್ಲಿ ನವಜಾತ ಗಂಡು ಶಿಶುವನ್ನು ಅಪಹರಣ ಪ್ರಕರಣ: ಅಪಹರಿಸಿದ 24 ಗಂಟೆಯಲ್ಲಿ ಆರೋಪಿಗಳ ಪತ್ತೆ:  ಮಗುವನ್ನ ಸಂರಕ್ಷಿಸಿ ತಾಯಿಗೆ ಒಪ್ಪಿಸಿದ ಪೊಲೀಸರು

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.

ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.

ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ನಾಲ್ಕು ವಿಶೇಷ ತನಿಖೆ ತಂಡ ರಚನೆ ಮಾಡಲಾಗಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಿ ತಾಯಿ ಕಸ್ತೂರಿಯವರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ವಿವರ

ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್​ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.

Ramesh Babu

Journalist

Recent Posts

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

2 hours ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

3 hours ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

5 hours ago

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…

6 hours ago

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು…

7 hours ago

ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಶವ ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…

12 hours ago