ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.
ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.
ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ವಿವರ
ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…