ಕಲಬುರಗಿಯಲ್ಲಿ ನವಜಾತ ಗಂಡು ಶಿಶುವನ್ನು ಅಪಹರಣ ಪ್ರಕರಣ: ಅಪಹರಿಸಿದ 24 ಗಂಟೆಯಲ್ಲಿ ಆರೋಪಿಗಳ ಪತ್ತೆ:  ಮಗುವನ್ನ ಸಂರಕ್ಷಿಸಿ ತಾಯಿಗೆ ಒಪ್ಪಿಸಿದ ಪೊಲೀಸರು

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.

ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.

ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ನಾಲ್ಕು ವಿಶೇಷ ತನಿಖೆ ತಂಡ ರಚನೆ ಮಾಡಲಾಗಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಿ ತಾಯಿ ಕಸ್ತೂರಿಯವರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ವಿವರ

ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್​ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

14 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

19 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago