ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.
ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.
ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ವಿವರ
ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…