ಕಲಬುರಗಿಯಲ್ಲಿ ನವಜಾತ ಗಂಡು ಶಿಶುವನ್ನು ಅಪಹರಣ ಪ್ರಕರಣ: ಅಪಹರಿಸಿದ 24 ಗಂಟೆಯಲ್ಲಿ ಆರೋಪಿಗಳ ಪತ್ತೆ:  ಮಗುವನ್ನ ಸಂರಕ್ಷಿಸಿ ತಾಯಿಗೆ ಒಪ್ಪಿಸಿದ ಪೊಲೀಸರು

ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಲಾಗಿತ್ತು.

ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.

ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ನಾಲ್ಕು ವಿಶೇಷ ತನಿಖೆ ತಂಡ ರಚನೆ ಮಾಡಲಾಗಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಿ ತಾಯಿ ಕಸ್ತೂರಿಯವರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ವಿವರ

ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್​ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

4 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

14 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago