ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…