Categories: ಕೋಲಾರ

ಕಲಬೆರಕೆ ಹಾಲು ತಯಾರಿಕಾ ದಂಧೆ ಪತ್ತೆ – 51 ಹಾಲಿನ ಕ್ಯಾನ್ ಪೊಲೀಸರ ವಶ

ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.

ಕೆಮಿಕಲ್ ಪೌಡರ್‌,  ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.‌

 ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್‌ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.

ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್‌ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ  ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.

ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್‌ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

29 minutes ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

57 minutes ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

5 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

7 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

19 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

21 hours ago