ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…