ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ.
ಕೆಮಿಕಲ್ ಪೌಡರ್, ನಂದಿನಿ ಪೌಡರ್ ಬಳಸಿ ಆಂಧ್ರ ಮೂಲದ ವ್ಯಕ್ತಿಗಳು ಹಾಲು ತಯಾರು ಮಾಡ್ತಿದ್ದರು.
ಹಾಲು ತಯಾರಿಕಾ ಮನೆಯ ಮೇಲೆ ಕೆಜಿಎಫ್ ನ ಆಂಡ್ರಸನ್ಪೇಟೆ ಪೊಲೀಸರು, ಆಹಾರ ಸುರಕ್ಷತಾ ಅಧಿಕಾರಿಗಳ ಸಮ್ಮುಖದಲ್ಲಿ ದಾಳಿ ನಡೆಸಿ ಕಲಬೆರಕೆ ಹಾಲು ತಯಾರು ಮಾಡ್ತಿದ್ದ 8 ಮಂದಿ ವಶಕ್ಕೆ ಪಡೆಯಲಾಗಿದೆ.
ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಕೆಮಿಕಲ್ ಮಿಶ್ರಿತ ಪುಡಿಗೆ ಪಾಮ್ ಆಯಿಲ್ ಬಳಸಿ ಹಾಲು ತಯಾರು ಮಾಡ್ತಿದ್ದರು, ಕಲಬೆರಕೆ ಹಾಲಿನ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಕೆ ಮಾಡುವ ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡಿದ್ದಾರೆ.
ಪೊಲೀಸರ ದಾಳಿ ವೇಳೆ ಕೆಮಿಕಲ್ ಮಿಶ್ರಿತ 56 ಹಾಲಿನ ಪೌಡರ್ ಚೀಲ, ಕಲಬೆರಕೆ ಹಾಲು ತುಂಬಿದ್ದ 51 ಕ್ಯಾನ್ ವಶಕ್ಕೆ ಪಡೆಯಲಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…