Categories: ಟಿವಿ

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ಆರಂಭ: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6:30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ.

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು.

ಅಂದರೆ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೀವು ವೀಕ್ಷಿಸಬಹುದು.

Ramesh Babu

Journalist

Share
Published by
Ramesh Babu

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago