Categories: ಟಿವಿ

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ಆರಂಭ: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6:30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ.

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು.

ಅಂದರೆ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೀವು ವೀಕ್ಷಿಸಬಹುದು.

Ramesh Babu

Journalist

Share
Published by
Ramesh Babu

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

5 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

9 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

12 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago