Categories: ಟಿವಿ

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ಆರಂಭ: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6:30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ.

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು.

ಅಂದರೆ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೀವು ವೀಕ್ಷಿಸಬಹುದು.

Ramesh Babu

Journalist

Share
Published by
Ramesh Babu

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago