ಕಲರ್ ಕಲರ್ ಮೆಕ್ಕೆಜೋಳ ಬೆಳದ ರೈತ: ಅದು ಎಲ್ಲಿ ಎಂತೀರಾ…? ಮಾಹಿತಿ ಇಲ್ಲಿದೆ ಓದಿ….

ಕೆಂಪು, ನೀಲಿ, ನೇರಳೆ, ಕಪ್ಪು ಮತ್ತು ಮಿಶ್ರ ಬಣ್ಣದ ಮೆಕ್ಕೆಜೋಳದ ತೆನೆಗಳು ಈಗ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ಹೊಲಗಳಲ್ಲಿ ಅರಳಿವೆ. ಸಾಮಾನ್ಯವಾಗಿ ಹಳದಿ ಅಥವಾ ಬಿಳಿ ಬಣ್ಣದಲ್ಲೇ ಕಂಡುಬರುವ ಜೋಳಕ್ಕಿಂತ ವಿಭಿನ್ನ ಬಣ್ಣದಲ್ಲಿ ಮಿನುಗುವ ಈ ತಳಿಗಳು ಕೃತಕವಾಗಿ ಬಣ್ಣ ಹಚ್ಚಿದವುಗಳಲ್ಲ, ಸಹಜವಾಗಿ ಬಣ್ಣಗಳನ್ನು ಹೊಂದಿರುವ ಅಪರೂಪದ ಜೋಳದ ಪ್ರಭೇದಗಳು.

ಈ ವಿಶೇಷ ಜೋಳವನ್ನು ತಾಲ್ಲೂಕಿನ ರೈತ ಎ.ಎಂ. ತ್ಯಾಗರಾಜ್ ತಮ್ಮ ಹೊಲದಲ್ಲಿ ಯಶಸ್ವಿಯಾಗಿ ಬೆಳೆಸಿದ್ದಾರೆ. ಕಡು ಕೆಂಪು, ನೇರಳೆ, ನೀಲಿ, ಹಳದಿ ಮತ್ತು ಕೆಂಪು–ಕಪ್ಪು ಮಿಶ್ರಿತ ಬಣ್ಣದ ಕಾಳುಗಳಿಂದ ತುಂಬಿದ ತೆನೆಗಳನ್ನು ನೋಡಲು ಸುತ್ತಮುತ್ತಲಿನ ರೈತರು ಹರಿದು ಬರುತ್ತಿದ್ದಾರೆ.

ಬಣ್ಣ ಬಣ್ಣ ಜೋಳದ ಇತಿಹಾಸ

ದಕ್ಷಿಣ ಅಮೆರಿಕಾದಲ್ಲಿ ಸುಮಾರು 3000 ವರ್ಷಗಳ ಹಿಂದೆಯೇ ಈ ಬಣ್ಣದ ಜೋಳ ಬೆಳೆದ ದಾಖಲೆಗಳಿವೆ. ಕ್ರಿ.ಶ. 1330 ರಿಂದ 1521ರವರೆಗೆ ಮೆಕ್ಸಿಕೋ ದೇಶದಲ್ಲಿ ವಾಸಿಸಿದ್ದ ಅಜಟೆಕ್ ಜನಾಂಗದವರ ಪ್ರಮುಖ ಆಹಾರವೂ ಇದೇ. ಇಂದಿಗೂ ಮೆಕ್ಸಿಕೋ, ಪೆರು ಮತ್ತು ಇತರೆ ದಕ್ಷಿಣ ಅಮೆರಿಕಾ ದೇಶಗಳಲ್ಲಿ ಈ ಜೋಳವನ್ನು ಆಹಾರ ಹಾಗೂ ಪಾನೀಯ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಪೆರು ದೇಶದ ಪ್ರಸಿದ್ಧ “ಚೀಚಾ ಮೊರಾಡ” ಪಾನೀಯ ಇದೇ ಬಣ್ಣದ ಜೋಳದಿಂದ ತಯಾರಾಗುತ್ತದೆ.

ನಮ್ಮ ದೇಶದಲ್ಲಿಯೂ ಮಿಜೋರಾಂ ರಾಜ್ಯದಲ್ಲಿ ಈ ಜೋಳವನ್ನು “ಮಿಮ್ ಬಾನ್” (ಜಿಗುಟಾದ ಜೋಳ) ಎಂಬ ಹೆಸರಿನಲ್ಲಿ ಬೆಳೆಯುತ್ತಾರೆ. ಇದಕ್ಕೆ ಸಿಹಿ ಮತ್ತು ಒಗರಿನ ರುಚಿಯಿದ್ದು, ಬೇಯಿಸಿದಾಗ ಇನ್ನಷ್ಟು ರುಚಿಕರವಾಗುತ್ತದೆ.

ಪೋಷಕಾಂಶಗಳ ಆಗರ

ಮೆಕ್ಸಿಕೋ ಮತ್ತು ಪೆರು ದೇಶಗಳಲ್ಲಿ ಹೆಚ್ಚಾಗಿ ಬೆಳೆದಿರುವ ಈ ಜೋಳ ಪೋಷಕಾಂಶಗಳ ಭಂಡಾರವಾಗಿದೆ. ಕಬ್ಬಿಣಾಂಶ ಹೆಚ್ಚಿದ್ದು, ರಕ್ತ ಉತ್ಪತ್ತಿಗೆ ನೆರವಾಗುತ್ತದೆ ಹಾಗೂ ರಕ್ತಹೀನತೆ ತಡೆಗಟ್ಟುತ್ತದೆ. ದೇಹದಾರ್ಢ್ಯತೆ ಹೆಚ್ಚಿಸುತ್ತದೆ. ಥಯಾಮಿನ್, ರಿಬೋಫ್ಲಾವಿನ್, ನಿಯಾಸಿನ್ ಸೇರಿದಂತೆ ವಿಟಮಿನ್ A ಮತ್ತು ವಿಟಮಿನ್ B ಸಮೃದ್ಧವಾಗಿದೆ.

ಆರೋಗ್ಯ ಪ್ರಯೋಜನಗಳು

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ಸಹಕಾರಿ. ಉರಿಯೂತ ನಿವಾರಕ ಹಾಗೂ ಕ್ಯಾನ್ಸರ್ ವಿರೋಧಿ ಗುಣಗಳನ್ನೂ ಹೊಂದಿದೆ. ನರಮಂಡಲದ ಕಾರ್ಯನಿರ್ವಹಣೆ ಸುಧಾರಿಸುತ್ತದೆ. ರಕ್ತದೊತ್ತಡ ನಿಯಂತ್ರಣ ಮತ್ತು ಮೂತ್ರಪಿಂಡ, ಕಣ್ಣಿನ ಆರೋಗ್ಯ ಸುಧಾರಿಸಲು ಸಹಕಾರಿ.

ಅಮೆರಿಕಾ ದೇಶಗಳಲ್ಲಿ ಬಣ್ಣದ ಜೋಳದಿಂದ ಪಾಪ್‌ಕಾರ್ನ್, ಚಿಪ್ಸ್, ಹಿಟ್ಟು ಹಾಗೂ ಪಾನೀಯಗಳನ್ನು ತಯಾರಿಸಲಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದನ್ನು “ಸೂಪರ್ ಫುಡ್” ಎಂದು ಕರೆಯಲಾಗುತ್ತಿದ್ದು, ಹೆಚ್ಚು ಬೇಡಿಕೆ ಇದೆ. ಆದರೆ ಇಂತಹ ಅಪರೂಪದ ಜೋಳವನ್ನು ನೋಡುವುದಕ್ಕೆ ಅಮೆರಿಕಾದತ್ತ ಮುಖ ಮಾಡುವ ಅಗತ್ಯವಿಲ್ಲ. ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ರೈತ ಎ.ಎಂ. ತ್ಯಾಗರಾಜ್ ಅವರ ಹೊಲದಲ್ಲಿಯೇ ಈ ನಿಧಿ ಸಿಗುತ್ತದೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

8 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

8 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

13 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

19 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago