ಕಲರ್ ಕಲರ್ ಮೆಕ್ಕೆಜೋಳ ಬೆಳದ ರೈತ: ಅದು ಎಲ್ಲಿ ಎಂತೀರಾ…? ಮಾಹಿತಿ ಇಲ್ಲಿದೆ ಓದಿ….

ಕೆಂಪು, ನೀಲಿ, ನೇರಳೆ, ಕಪ್ಪು ಮತ್ತು ಮಿಶ್ರ ಬಣ್ಣದ ಮೆಕ್ಕೆಜೋಳದ ತೆನೆಗಳು ಈಗ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ಹೊಲಗಳಲ್ಲಿ ಅರಳಿವೆ. ಸಾಮಾನ್ಯವಾಗಿ ಹಳದಿ ಅಥವಾ ಬಿಳಿ ಬಣ್ಣದಲ್ಲೇ ಕಂಡುಬರುವ ಜೋಳಕ್ಕಿಂತ ವಿಭಿನ್ನ ಬಣ್ಣದಲ್ಲಿ ಮಿನುಗುವ ಈ ತಳಿಗಳು ಕೃತಕವಾಗಿ ಬಣ್ಣ ಹಚ್ಚಿದವುಗಳಲ್ಲ, ಸಹಜವಾಗಿ ಬಣ್ಣಗಳನ್ನು ಹೊಂದಿರುವ ಅಪರೂಪದ ಜೋಳದ ಪ್ರಭೇದಗಳು.

ಈ ವಿಶೇಷ ಜೋಳವನ್ನು ತಾಲ್ಲೂಕಿನ ರೈತ ಎ.ಎಂ. ತ್ಯಾಗರಾಜ್ ತಮ್ಮ ಹೊಲದಲ್ಲಿ ಯಶಸ್ವಿಯಾಗಿ ಬೆಳೆಸಿದ್ದಾರೆ. ಕಡು ಕೆಂಪು, ನೇರಳೆ, ನೀಲಿ, ಹಳದಿ ಮತ್ತು ಕೆಂಪು–ಕಪ್ಪು ಮಿಶ್ರಿತ ಬಣ್ಣದ ಕಾಳುಗಳಿಂದ ತುಂಬಿದ ತೆನೆಗಳನ್ನು ನೋಡಲು ಸುತ್ತಮುತ್ತಲಿನ ರೈತರು ಹರಿದು ಬರುತ್ತಿದ್ದಾರೆ.

ಬಣ್ಣ ಬಣ್ಣ ಜೋಳದ ಇತಿಹಾಸ

ದಕ್ಷಿಣ ಅಮೆರಿಕಾದಲ್ಲಿ ಸುಮಾರು 3000 ವರ್ಷಗಳ ಹಿಂದೆಯೇ ಈ ಬಣ್ಣದ ಜೋಳ ಬೆಳೆದ ದಾಖಲೆಗಳಿವೆ. ಕ್ರಿ.ಶ. 1330 ರಿಂದ 1521ರವರೆಗೆ ಮೆಕ್ಸಿಕೋ ದೇಶದಲ್ಲಿ ವಾಸಿಸಿದ್ದ ಅಜಟೆಕ್ ಜನಾಂಗದವರ ಪ್ರಮುಖ ಆಹಾರವೂ ಇದೇ. ಇಂದಿಗೂ ಮೆಕ್ಸಿಕೋ, ಪೆರು ಮತ್ತು ಇತರೆ ದಕ್ಷಿಣ ಅಮೆರಿಕಾ ದೇಶಗಳಲ್ಲಿ ಈ ಜೋಳವನ್ನು ಆಹಾರ ಹಾಗೂ ಪಾನೀಯ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಪೆರು ದೇಶದ ಪ್ರಸಿದ್ಧ “ಚೀಚಾ ಮೊರಾಡ” ಪಾನೀಯ ಇದೇ ಬಣ್ಣದ ಜೋಳದಿಂದ ತಯಾರಾಗುತ್ತದೆ.

ನಮ್ಮ ದೇಶದಲ್ಲಿಯೂ ಮಿಜೋರಾಂ ರಾಜ್ಯದಲ್ಲಿ ಈ ಜೋಳವನ್ನು “ಮಿಮ್ ಬಾನ್” (ಜಿಗುಟಾದ ಜೋಳ) ಎಂಬ ಹೆಸರಿನಲ್ಲಿ ಬೆಳೆಯುತ್ತಾರೆ. ಇದಕ್ಕೆ ಸಿಹಿ ಮತ್ತು ಒಗರಿನ ರುಚಿಯಿದ್ದು, ಬೇಯಿಸಿದಾಗ ಇನ್ನಷ್ಟು ರುಚಿಕರವಾಗುತ್ತದೆ.

ಪೋಷಕಾಂಶಗಳ ಆಗರ

ಮೆಕ್ಸಿಕೋ ಮತ್ತು ಪೆರು ದೇಶಗಳಲ್ಲಿ ಹೆಚ್ಚಾಗಿ ಬೆಳೆದಿರುವ ಈ ಜೋಳ ಪೋಷಕಾಂಶಗಳ ಭಂಡಾರವಾಗಿದೆ. ಕಬ್ಬಿಣಾಂಶ ಹೆಚ್ಚಿದ್ದು, ರಕ್ತ ಉತ್ಪತ್ತಿಗೆ ನೆರವಾಗುತ್ತದೆ ಹಾಗೂ ರಕ್ತಹೀನತೆ ತಡೆಗಟ್ಟುತ್ತದೆ. ದೇಹದಾರ್ಢ್ಯತೆ ಹೆಚ್ಚಿಸುತ್ತದೆ. ಥಯಾಮಿನ್, ರಿಬೋಫ್ಲಾವಿನ್, ನಿಯಾಸಿನ್ ಸೇರಿದಂತೆ ವಿಟಮಿನ್ A ಮತ್ತು ವಿಟಮಿನ್ B ಸಮೃದ್ಧವಾಗಿದೆ.

ಆರೋಗ್ಯ ಪ್ರಯೋಜನಗಳು

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ಸಹಕಾರಿ. ಉರಿಯೂತ ನಿವಾರಕ ಹಾಗೂ ಕ್ಯಾನ್ಸರ್ ವಿರೋಧಿ ಗುಣಗಳನ್ನೂ ಹೊಂದಿದೆ. ನರಮಂಡಲದ ಕಾರ್ಯನಿರ್ವಹಣೆ ಸುಧಾರಿಸುತ್ತದೆ. ರಕ್ತದೊತ್ತಡ ನಿಯಂತ್ರಣ ಮತ್ತು ಮೂತ್ರಪಿಂಡ, ಕಣ್ಣಿನ ಆರೋಗ್ಯ ಸುಧಾರಿಸಲು ಸಹಕಾರಿ.

ಅಮೆರಿಕಾ ದೇಶಗಳಲ್ಲಿ ಬಣ್ಣದ ಜೋಳದಿಂದ ಪಾಪ್‌ಕಾರ್ನ್, ಚಿಪ್ಸ್, ಹಿಟ್ಟು ಹಾಗೂ ಪಾನೀಯಗಳನ್ನು ತಯಾರಿಸಲಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದನ್ನು “ಸೂಪರ್ ಫುಡ್” ಎಂದು ಕರೆಯಲಾಗುತ್ತಿದ್ದು, ಹೆಚ್ಚು ಬೇಡಿಕೆ ಇದೆ. ಆದರೆ ಇಂತಹ ಅಪರೂಪದ ಜೋಳವನ್ನು ನೋಡುವುದಕ್ಕೆ ಅಮೆರಿಕಾದತ್ತ ಮುಖ ಮಾಡುವ ಅಗತ್ಯವಿಲ್ಲ. ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ರೈತ ಎ.ಎಂ. ತ್ಯಾಗರಾಜ್ ಅವರ ಹೊಲದಲ್ಲಿಯೇ ಈ ನಿಧಿ ಸಿಗುತ್ತದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago