ಕಲರ್ ಕಲರ್ ಮೆಕ್ಕೆಜೋಳ ಬೆಳದ ರೈತ: ಅದು ಎಲ್ಲಿ ಎಂತೀರಾ…? ಮಾಹಿತಿ ಇಲ್ಲಿದೆ ಓದಿ….

ಕೆಂಪು, ನೀಲಿ, ನೇರಳೆ, ಕಪ್ಪು ಮತ್ತು ಮಿಶ್ರ ಬಣ್ಣದ ಮೆಕ್ಕೆಜೋಳದ ತೆನೆಗಳು ಈಗ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ಹೊಲಗಳಲ್ಲಿ ಅರಳಿವೆ. ಸಾಮಾನ್ಯವಾಗಿ ಹಳದಿ ಅಥವಾ ಬಿಳಿ ಬಣ್ಣದಲ್ಲೇ ಕಂಡುಬರುವ ಜೋಳಕ್ಕಿಂತ ವಿಭಿನ್ನ ಬಣ್ಣದಲ್ಲಿ ಮಿನುಗುವ ಈ ತಳಿಗಳು ಕೃತಕವಾಗಿ ಬಣ್ಣ ಹಚ್ಚಿದವುಗಳಲ್ಲ, ಸಹಜವಾಗಿ ಬಣ್ಣಗಳನ್ನು ಹೊಂದಿರುವ ಅಪರೂಪದ ಜೋಳದ ಪ್ರಭೇದಗಳು.

ಈ ವಿಶೇಷ ಜೋಳವನ್ನು ತಾಲ್ಲೂಕಿನ ರೈತ ಎ.ಎಂ. ತ್ಯಾಗರಾಜ್ ತಮ್ಮ ಹೊಲದಲ್ಲಿ ಯಶಸ್ವಿಯಾಗಿ ಬೆಳೆಸಿದ್ದಾರೆ. ಕಡು ಕೆಂಪು, ನೇರಳೆ, ನೀಲಿ, ಹಳದಿ ಮತ್ತು ಕೆಂಪು–ಕಪ್ಪು ಮಿಶ್ರಿತ ಬಣ್ಣದ ಕಾಳುಗಳಿಂದ ತುಂಬಿದ ತೆನೆಗಳನ್ನು ನೋಡಲು ಸುತ್ತಮುತ್ತಲಿನ ರೈತರು ಹರಿದು ಬರುತ್ತಿದ್ದಾರೆ.

ಬಣ್ಣ ಬಣ್ಣ ಜೋಳದ ಇತಿಹಾಸ

ದಕ್ಷಿಣ ಅಮೆರಿಕಾದಲ್ಲಿ ಸುಮಾರು 3000 ವರ್ಷಗಳ ಹಿಂದೆಯೇ ಈ ಬಣ್ಣದ ಜೋಳ ಬೆಳೆದ ದಾಖಲೆಗಳಿವೆ. ಕ್ರಿ.ಶ. 1330 ರಿಂದ 1521ರವರೆಗೆ ಮೆಕ್ಸಿಕೋ ದೇಶದಲ್ಲಿ ವಾಸಿಸಿದ್ದ ಅಜಟೆಕ್ ಜನಾಂಗದವರ ಪ್ರಮುಖ ಆಹಾರವೂ ಇದೇ. ಇಂದಿಗೂ ಮೆಕ್ಸಿಕೋ, ಪೆರು ಮತ್ತು ಇತರೆ ದಕ್ಷಿಣ ಅಮೆರಿಕಾ ದೇಶಗಳಲ್ಲಿ ಈ ಜೋಳವನ್ನು ಆಹಾರ ಹಾಗೂ ಪಾನೀಯ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಪೆರು ದೇಶದ ಪ್ರಸಿದ್ಧ “ಚೀಚಾ ಮೊರಾಡ” ಪಾನೀಯ ಇದೇ ಬಣ್ಣದ ಜೋಳದಿಂದ ತಯಾರಾಗುತ್ತದೆ.

ನಮ್ಮ ದೇಶದಲ್ಲಿಯೂ ಮಿಜೋರಾಂ ರಾಜ್ಯದಲ್ಲಿ ಈ ಜೋಳವನ್ನು “ಮಿಮ್ ಬಾನ್” (ಜಿಗುಟಾದ ಜೋಳ) ಎಂಬ ಹೆಸರಿನಲ್ಲಿ ಬೆಳೆಯುತ್ತಾರೆ. ಇದಕ್ಕೆ ಸಿಹಿ ಮತ್ತು ಒಗರಿನ ರುಚಿಯಿದ್ದು, ಬೇಯಿಸಿದಾಗ ಇನ್ನಷ್ಟು ರುಚಿಕರವಾಗುತ್ತದೆ.

ಪೋಷಕಾಂಶಗಳ ಆಗರ

ಮೆಕ್ಸಿಕೋ ಮತ್ತು ಪೆರು ದೇಶಗಳಲ್ಲಿ ಹೆಚ್ಚಾಗಿ ಬೆಳೆದಿರುವ ಈ ಜೋಳ ಪೋಷಕಾಂಶಗಳ ಭಂಡಾರವಾಗಿದೆ. ಕಬ್ಬಿಣಾಂಶ ಹೆಚ್ಚಿದ್ದು, ರಕ್ತ ಉತ್ಪತ್ತಿಗೆ ನೆರವಾಗುತ್ತದೆ ಹಾಗೂ ರಕ್ತಹೀನತೆ ತಡೆಗಟ್ಟುತ್ತದೆ. ದೇಹದಾರ್ಢ್ಯತೆ ಹೆಚ್ಚಿಸುತ್ತದೆ. ಥಯಾಮಿನ್, ರಿಬೋಫ್ಲಾವಿನ್, ನಿಯಾಸಿನ್ ಸೇರಿದಂತೆ ವಿಟಮಿನ್ A ಮತ್ತು ವಿಟಮಿನ್ B ಸಮೃದ್ಧವಾಗಿದೆ.

ಆರೋಗ್ಯ ಪ್ರಯೋಜನಗಳು

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ಸಹಕಾರಿ. ಉರಿಯೂತ ನಿವಾರಕ ಹಾಗೂ ಕ್ಯಾನ್ಸರ್ ವಿರೋಧಿ ಗುಣಗಳನ್ನೂ ಹೊಂದಿದೆ. ನರಮಂಡಲದ ಕಾರ್ಯನಿರ್ವಹಣೆ ಸುಧಾರಿಸುತ್ತದೆ. ರಕ್ತದೊತ್ತಡ ನಿಯಂತ್ರಣ ಮತ್ತು ಮೂತ್ರಪಿಂಡ, ಕಣ್ಣಿನ ಆರೋಗ್ಯ ಸುಧಾರಿಸಲು ಸಹಕಾರಿ.

ಅಮೆರಿಕಾ ದೇಶಗಳಲ್ಲಿ ಬಣ್ಣದ ಜೋಳದಿಂದ ಪಾಪ್‌ಕಾರ್ನ್, ಚಿಪ್ಸ್, ಹಿಟ್ಟು ಹಾಗೂ ಪಾನೀಯಗಳನ್ನು ತಯಾರಿಸಲಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದನ್ನು “ಸೂಪರ್ ಫುಡ್” ಎಂದು ಕರೆಯಲಾಗುತ್ತಿದ್ದು, ಹೆಚ್ಚು ಬೇಡಿಕೆ ಇದೆ. ಆದರೆ ಇಂತಹ ಅಪರೂಪದ ಜೋಳವನ್ನು ನೋಡುವುದಕ್ಕೆ ಅಮೆರಿಕಾದತ್ತ ಮುಖ ಮಾಡುವ ಅಗತ್ಯವಿಲ್ಲ. ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ರೈತ ಎ.ಎಂ. ತ್ಯಾಗರಾಜ್ ಅವರ ಹೊಲದಲ್ಲಿಯೇ ಈ ನಿಧಿ ಸಿಗುತ್ತದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

5 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago