ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು ರೂ.2,000/- ಗಳ ಮಾಸಾಶನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿರುತ್ತದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶಗಳಿದ್ದು, ಅರ್ಹರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು, ಅರ್ಜಿದಾರರು 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು, ಅರ್ಜಿದಾರರು ಸರ್ಕಾರದ ಯಾವುದೇ ಇತರೇ ಇಲಾಖೆಯ ಯೋಜನೆಗಳ ಫಲಾನುಭವಿಗಳಾಗಿರಬಾರದು, ಅರ್ಜಿದಾರರ ವಾರ್ಷಿಕ ಆದಾಯ ರೂ.1.00 ಲಕ್ಷದ ಮಿತಿಯಲ್ಲಿರಬೇಕು.
ಅಸಕ್ತ ಅರ್ಹ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ ಇಲ್ಲಿಗೆ ಭೇಟಿ ನೀಡಿ ಅರ್ಜಿ / ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…