ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು ರೂ.2,000/- ಗಳ ಮಾಸಾಶನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿರುತ್ತದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶಗಳಿದ್ದು, ಅರ್ಹರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು, ಅರ್ಜಿದಾರರು 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು, ಅರ್ಜಿದಾರರು ಸರ್ಕಾರದ ಯಾವುದೇ ಇತರೇ ಇಲಾಖೆಯ ಯೋಜನೆಗಳ ಫಲಾನುಭವಿಗಳಾಗಿರಬಾರದು, ಅರ್ಜಿದಾರರ ವಾರ್ಷಿಕ ಆದಾಯ ರೂ.1.00 ಲಕ್ಷದ ಮಿತಿಯಲ್ಲಿರಬೇಕು.
ಅಸಕ್ತ ಅರ್ಹ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ ಇಲ್ಲಿಗೆ ಭೇಟಿ ನೀಡಿ ಅರ್ಜಿ / ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…