Categories: ಲೇಖನ

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ…..

ಅಕಾಡೆಮಿಗಳು – ಪ್ರಾಧಿಕಾರಗಳು – ಲಲಿತ ಕಲೆಗಳು – ಅಧ್ಯಕ್ಷರು ಮತ್ತು ಸದಸ್ಯರು – ಪ್ರಶಸ್ತಿಗಳು – ಎಡ ಬಲ ಪಂಥಗಳು – ಸಾಂಸ್ಕೃತಿಕ ರಾಯಭಾರ – ಲಾಬಿಗಳು – ಪ್ರಾಮಾಣಿಕ ಅರ್ಹರು – ಚಮಚಾಗಳು……….

ಸಾಹಿತ್ಯ, ಸಂಗೀತ, ಭಾಷೆ, ಕ್ರೀಡೆ, ವಿಜ್ಞಾನ ಸೇರಿ ಸುಮಾರು 40/50 ಅಕಾಡೆಮಿಗಳು, ಪ್ರಾಧಿಕಾರಗಳು, ಮಂಡಳಿಗಳು ಅದಕ್ಕೆ ಅಧ್ಯಕ್ಷರು, ಒಂದಷ್ಟು ಸದಸ್ಯರನ್ನು ಎಲ್ಲಾ ಸರ್ಕಾರಗಳ ಸಮಯದಲ್ಲಿ ನೇಮಕ ಮಾಡಲಾಗುತ್ತದೆ……

ಇದರ ಜೊತೆಗೆ ಹಣಕಾಸಿನ ಅನುದಾನ, ಪ್ರಶಸ್ತಿಗಳು, ಸಹಾಯಧನ, ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ಚಟುವಟಿಕೆಗಳು ನಡೆಯುತ್ತವೆ…..

ತೊಂಬತ್ತರ ದಶಕದ ಆರಂಭದಲ್ಲಿ ಭಾರತದ ಜಾಗೃತ ಮನಸ್ಥಿತಿಯ ಮುಖ್ಯವಾಹಿನಿ ಜನರಲ್ಲಿ ಎಡ ಬಲ ಎಂಬ ಪಂಥಗಳ ವಿಚಾರಧಾರೆ ವ್ಯಾಪಕವಾಗಿ ಹರಡಿತು……

ಎಡ, ಪ್ರಗತಿಪರ, ಬಸವತತ್ವ ಮತ್ತು ಅಂಬೇಡ್ಕರ್ ವಾದದ ಜನರಿಗೆ ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಲಪಂಥೀಯರಿಗೆ ಬಿಜೆಪಿ ಸಹಾನುಭೂತಿ ತೋರಿದವು ಅಥವಾ ನೆಲೆ ಒದಗಿಸಿದವು. ಎಲ್ಲೆಲ್ಲಿ ಆ ಪಕ್ಷಗಳು ಅಧಿಕಾರ ಸ್ಥಾಪಿಸಿದವೋ ಅಲ್ಲೆಲ್ಲಾ ತಮ್ಮ ಪಕ್ಷದ ಪರ ನಿಲುವನ್ನು ಹೊಂದಿರುವವರಿಗೆ ಅಧಿಕಾರ ಮತ್ತು ಪ್ರಶಸ್ತಿಗಳನ್ನು ಕೊಡತೊಡಗಿದವು. ಇದು ಸಹಜ ಸ್ವಾಭಾವಿಕ ಕ್ರಿಯೆಯಾಗಿ ಮುಂದುವರಿಯುತ್ತಿತ್ತು……

ಕ್ರಮೇಣ ಸಂಪರ್ಕ ಕ್ರಾಂತಿಯ ಫಲವಾಗಿ ಕಲಾ ಮಾಧ್ಯಮ ಬೃಹದಾಕಾರವಾಗಿ ಬೆಳೆಯತೊಡಗಿತು. ಸಾಂಸ್ಕೃತಿಕ ಲೋಕವನ್ನು ಮೀರಿ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರವನ್ನು ಆಕ್ರಮಿಸಿದವು. ಅಲ್ಲಿಂದಲೇ ಈ ಅಕಾಡೆಮಿಗಳ ವ್ಯಾಪಾರೀಕರಣ, ರಾಜಕೀಕರಣ, ಜಾತೀಕರಣ, ಕೇಸರೀಕರಣ, ಗುಲಾಮೀಕರಣ ತನ್ನ ಮಿತಿ ಮೀರಿತು……

ಈಗಲೂ ಎಲ್ಲಾ ಸ್ಥಾನಗಳು ಸಂಪೂರ್ಣ ಲಾಭಿಗಳು ಎಂದು ಹೇಳಲಾಗುವುದಿಲ್ಲ. ಶೇಕಡಾ 25% ರಷ್ಟು ಪ್ರತಿಭಾವಂತ ಅರ್ಹರು, 25% ರಷ್ಟು ಕನಿಷ್ಠ ಪ್ರಮಾಣದ ಸಹಿಸಿಕೊಳ್ಳಬಹುದಾದಷ್ಟು ಪರಿಚಯ – ಪ್ರಭಾವ ಬೀರಿ ಸ್ಥಾನ ಪಡೆಯುತ್ತಾರೆ. ಇನ್ನುಳಿದ 50% ರಷ್ಟು ಜನರು ಅತ್ಯಂತ ಕೆಳ ದರ್ಜೆಯ ವಿಧಾನಗಳಿಗೆ ಮೊರೆ ಹೋಗುತ್ತಾರೆ……

ಒಂದಷ್ಟು ಕಲಾ ಸೇವೆಯ ಹೆಸರಿನಲ್ಲಿ ಅಥವಾ ಬರಹಗಳಲ್ಲಿ ಅಥವಾ ಸಮಾರಂಭಗಳಲ್ಲಿ ಒಂದು ಪಂಥ ಅಥವಾ ಪಕ್ಷದ ಬಾಲಬುಡಕರಾಗಿ ಅದನ್ನು ಸಮರ್ಥಿಸಿಕೊಳ್ಳುವುದಲ್ಲದೆ ಇನ್ನೊಂದು ಸೈದ್ಧಾಂತಿಕ ವಿರೋಧಿಗಳ ವಿಚಾರವನ್ನು ತಮ್ಮೆಲ್ಲಾ ಸಭ್ಯತೆ ಮೀರಿ ತೆಗಳುತ್ತಾರೆ. ಅಕ್ಷರಗಳಿಗೆ ಅಕ್ಷರಗಳನ್ನು ಜೋಡಿಸಿ ಇತಿಹಾಸವನ್ನು, ವರ್ತಮಾನವನ್ನು ತಿರುಚಿ ವಿಷ ಉಗುಳುತ್ತಾರೆ. ಇದನ್ನು ದಾಖಲೆ ಎಂಬಂತೆ ಸಂಗ್ರಹಿಸಿಟ್ಟುಕೊಂಡು ಒಂದು ಸಾಧನೆ ಎಂಬಂತೆ ತೋರಿಸಿ ಅಧಿಕಾರ ಗಿಟ್ಟಿಸಿಕೊಳ್ಳುತ್ತಾರೆ. ಕೆಲವು ತಲೆ ಹಿಡುಕರು, ತಲೆ ಒಡೆಯುವವರು ಸಹ ದಲ್ಲಾಳಿಗಳಂತೆ ಇವುಗಳಲ್ಲಿ ಸ್ಥಾನ ಪಡೆಯುತ್ತಾರೆ…….

ಯಾವ ಸಂಸ್ಥೆಗಳು ನಮ್ಮ ‌ಸಾಂಸ್ಕೃತಿಕ – ಸಾಹಿತ್ಯಕ ಕಲಾ ಲೋಕವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಿರ್ವಹಿಸಬೇಕೋ ಅದೇ ಸಂಸ್ಥೆಗಳು ಇಂದು ತಮ್ಮ ಸೂಕ್ಷ್ಮತೆ, ಸಂವೇದನೆಯನ್ನು ಕಳೆದುಕೊಂಡು ಬೆತ್ತಲಾಗಿವೆ…….

ಕಳೆದ ಎರಡು ಮೂರು ದಶಕಗಳ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು ಹಾಗು ಸರ್ಕಾರಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನೊಮ್ಮೆ ಪರಿಶೀಲಿಸಿ. ನಿಮಗೆ ಪಂಥಗಳ, ಸರ್ಕಾರಿ ಕೃಪಾಪೋಷಿತ ಮಂಡಳಿಯ ಗುಲಾಮಿತನದ ಅರಿವಾಗುತ್ತದೆ…….

ಅತ್ಯಂತ ಬೇಸರದ ಸಂಗತಿ ಎಂದರೆ, ಒಂದಷ್ಟು ಸೂಕ್ಷ್ಮ ಮನಸ್ಸಿನ, ಕ್ರಿಯಾತ್ಮಕ ಮನಸ್ಥಿತಿಯ, ಸಮಾಜಕ್ಕೆ ಆದರ್ಶ ಪ್ರಾಯವಾಗಿ ಜೀವನ ನಡೆಸಬೇಕಾದ ಈ ಕಲಾಕಾರರು ಅಧಿಕಾರ, ಪ್ರಶಸ್ತಿಯ ಆಸೆಗಾಗಿ ಆತ್ಮವಂಚನೆ ಮಾಡಿಕೊಂಡು ಸತ್ಯದ ಸಮಾಧಿಯ ಮೇಲೆ ಸುಳ್ಳಿನ ಅರಮನೆ ಕಟ್ಟುತ್ತಾ ಮುಂದಿನ ಪೀಳಿಗೆಯ ಯುವಕರ ದಾರಿ ತಪ್ಪಿಸುತ್ತಿದ್ದಾರೆ. ಅದರಲ್ಲೂ ಕೆಲವು ಬರಹಗಾರರು ಅಕ್ಷರಗಳನ್ನೇ ವಿಕೃತ ಉದ್ದೇಶಗಳಿಗಾಗಿ ಬಳಸುವ ದುರಂತ ಸನ್ನಿವೇಶಗಳಲ್ಲಿ ನಾವಿದ್ದೇವೆ…..

ಅಕಾಡೆಮಿ, ಪ್ರಾಧಿಕಾರಗಳ ಅವಶ್ಯಕತೆ ಖಂಡಿತ ಇದೆ. ಮನುಷ್ಯನ ನಾಗರಿಕತೆಯ ಉಗಮದಿಂದಲೂ, ರಾಜಾಧಿಕಾರದಲ್ಲೂ ಇದು ಸಮೃದ್ಧವಾಗಿ ಬೆಳೆದು ಬಂದಿದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಇದು ಹಾದಿ ತಪ್ಪಿರುವುದು ಅಪಾಯಕಾರಿಯಾಗಿದೆ. ಪಂಥಗಳು, ಪಕ್ಷಗಳನ್ನು ಮೀರಿ ಸತ್ಯ, ವಾಸ್ತವ, ಕ್ರಿಯಾತ್ಮಕತೆ, ಸ್ವಾಭಿಮಾನ ಮತ್ತು ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಈ ಕಲಾ ಲೋಕ ಮತ್ತೊಮ್ಮೆ ಕಾರ್ಯ ನಿರ್ವಹಿಸಲಿ. ಆ ಸಾಧಕರ ಪ್ರತಿಭೆಗಳ ಆತ್ಮಸಾಕ್ಷಿ ಮತ್ತೊಮ್ಮೆ ಜಾಗೃತವಾಗಲಿ ಎಂದು ಎಚ್ಚರಿಸುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

21 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago