ಕಲುಷಿತ ನೀರು ಕುಡಿದು ಇಬ್ಬರ ಸಾವು: 80‌ ಮಂದಿ‌ ಅಸ್ವಸ್ಥ: ಮೂವರ ಸ್ಥಿತಿ ಗಂಭೀರ..!

ಬಹುತೇಕ ಗ್ರಾಮೀಣ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧೀಕರಿಸಿದ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ತೆಲಂಗಾಣ ರಾಜ್ಯದಲ್ಲಿ ಕಲುಷಿತ ನೀರು‌ ಕುಡಿದು ಇಬ್ಬರು ಸಾವನ್ನಪ್ಪಿದ್ದು, ಸುಮಾರು 80 ಮಂದಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮಂಡಲದ ಸಂಜೀವರಾವ್‌ಪೇಟೆಯ ಬಾವಿಯ ಕಲುಷಿತ ನೀರನ್ನು ಸೇವಿಸಿದ್ದರಿಂದ ಈ ಘಟನೆ ನಡೆದಿದೆ.

ಮಿಷನ್ ಭಗೀರಥ ಯೋಜನೆ ಮೂಲಕ ನೀರು ಪೂರೈಕೆಯಲ್ಲಿ ನಿರಂತರ ಅಡಚಣೆಯ ನಂತರ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ, ಸಂಜೀವರಾವ್ ಪೇಟೆಯ ಎರಡು ಕಾಲೋನಿಗಳ ನಿವಾಸಿಗಳು ಮಿಷನ್ ಭಗೀರಥ ಯೋಜನೆಯ ಮೂಲಕ ನೀರು ಪೂರೈಕೆಯಲ್ಲಿ ವ್ಯತ್ಯಯವಾದ ನಂತರ ಬಾವಿಯ ನೀರನ್ನು ಆಶ್ರಯಿಸಿದ್ದಾರೆ.

ಬಾವಿಯಲ್ಲಿನ ನೀರು ಕಲುಷಿತಗೊಂಡಿದೆ ಎಂದು ವರದಿಗಳು ಹೇಳಿವೆ. ಆದರೆ ಬೇರೆ ದಾರಿಯಿಲ್ಲದೇ ಬಾವಿಯ ನೀರನ್ಮುನು ಸೇವಿಸಿದ ಎಲ್ಲರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ.

ಮಹೇಶ್ (22) ಮತ್ತು ಸಾಯಮ್ಮ (70) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ. ಅಸ್ವಸ್ಥರಾದ 50 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಬ್ಬರನ್ನು ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ, ಇಬ್ಬರನ್ನು ನಾರಾಯಣಖೇಡ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗ್ರಾಮಸ್ಥರ ಪ್ರಕಾರ, ಗ್ರಾಮದಲ್ಲಿ ಮೂರು ಟ್ಯಾಂಕ್‌ಗಳಿದ್ದವು, ಮಿಷನ್ ಭಗೀರಥ ಯೋಜನೆಗೆ ಎರಡು ಟ್ಯಾಂಕ್‌ಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಹಳೆಯ ಟ್ಯಾಂಕ್‌ಗೆ ಬಾವಿಗೆ ಸಂಪರ್ಕ ಕಲ್ಪಿಸಲಾಗಿದೆ. ಎರಡು ಬಿ.ಸಿ ಕಾಲೋನಿಗಳ ನಿವಾಸಿಗಳು ಬಾವಿ ನೀರಿನ ಟ್ಯಾಂಕ್ ಮೂಲಕ ಸರಬರಾಜು ಮಾಡಿದ ನೀರನ್ನು ಕುಡಿದು ಅಸ್ವಸ್ಥರಾದರು ಎಂದಿದ್ದಾರೆ.

ನಾರಾಯಣಖೇಡ್ ಶಾಸಕ ಪಿ.ಸಂಜೀವ ರೆಡ್ಡಿ ಮಾತನಾಡಿ, ಕಂದಾಯ ವಿಭಾಗಾಧಿಕಾರಿ (ಆರ್‌ಡಿಒ) ಅಶೋಕ್ ಚಕ್ರವರ್ತಿ, ಆಸ್ಪತ್ರೆ ಸೇವೆಗಳ ಜಿಲ್ಲಾ ಸಂಯೋಜಕ (ಡಿಸಿಎಚ್‌ಎಸ್), ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಡಿಎಂಎಚ್‌ಒ) ಡಾ.ಗಾಯತ್ರಿದೇವಿ ಮತ್ತು ಉಪ ಡಿಎಂಎಚ್‌ಒ ಡಾ.ಸಂಧ್ಯಾರಾಣಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ವೈದ್ಯಕೀಯ ಶಿಬಿರ ಏರ್ಪಡಿಸಲಾಗಿದೆ. ಶುದ್ಧ ಕುಡಿಯುವ ನೀರನ್ನ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

18 minutes ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

2 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

10 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

10 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

13 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

23 hours ago