ಬಹುತೇಕ ಗ್ರಾಮೀಣ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧೀಕರಿಸಿದ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ತೆಲಂಗಾಣ ರಾಜ್ಯದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿದ್ದು, ಸುಮಾರು 80 ಮಂದಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮಂಡಲದ ಸಂಜೀವರಾವ್ಪೇಟೆಯ ಬಾವಿಯ ಕಲುಷಿತ ನೀರನ್ನು ಸೇವಿಸಿದ್ದರಿಂದ ಈ ಘಟನೆ ನಡೆದಿದೆ.
ಮಿಷನ್ ಭಗೀರಥ ಯೋಜನೆ ಮೂಲಕ ನೀರು ಪೂರೈಕೆಯಲ್ಲಿ ನಿರಂತರ ಅಡಚಣೆಯ ನಂತರ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಸಂಜೀವರಾವ್ ಪೇಟೆಯ ಎರಡು ಕಾಲೋನಿಗಳ ನಿವಾಸಿಗಳು ಮಿಷನ್ ಭಗೀರಥ ಯೋಜನೆಯ ಮೂಲಕ ನೀರು ಪೂರೈಕೆಯಲ್ಲಿ ವ್ಯತ್ಯಯವಾದ ನಂತರ ಬಾವಿಯ ನೀರನ್ನು ಆಶ್ರಯಿಸಿದ್ದಾರೆ.
ಬಾವಿಯಲ್ಲಿನ ನೀರು ಕಲುಷಿತಗೊಂಡಿದೆ ಎಂದು ವರದಿಗಳು ಹೇಳಿವೆ. ಆದರೆ ಬೇರೆ ದಾರಿಯಿಲ್ಲದೇ ಬಾವಿಯ ನೀರನ್ಮುನು ಸೇವಿಸಿದ ಎಲ್ಲರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ.
ಮಹೇಶ್ (22) ಮತ್ತು ಸಾಯಮ್ಮ (70) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ. ಅಸ್ವಸ್ಥರಾದ 50 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಬ್ಬರನ್ನು ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ, ಇಬ್ಬರನ್ನು ನಾರಾಯಣಖೇಡ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗ್ರಾಮಸ್ಥರ ಪ್ರಕಾರ, ಗ್ರಾಮದಲ್ಲಿ ಮೂರು ಟ್ಯಾಂಕ್ಗಳಿದ್ದವು, ಮಿಷನ್ ಭಗೀರಥ ಯೋಜನೆಗೆ ಎರಡು ಟ್ಯಾಂಕ್ಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಹಳೆಯ ಟ್ಯಾಂಕ್ಗೆ ಬಾವಿಗೆ ಸಂಪರ್ಕ ಕಲ್ಪಿಸಲಾಗಿದೆ. ಎರಡು ಬಿ.ಸಿ ಕಾಲೋನಿಗಳ ನಿವಾಸಿಗಳು ಬಾವಿ ನೀರಿನ ಟ್ಯಾಂಕ್ ಮೂಲಕ ಸರಬರಾಜು ಮಾಡಿದ ನೀರನ್ನು ಕುಡಿದು ಅಸ್ವಸ್ಥರಾದರು ಎಂದಿದ್ದಾರೆ.
ನಾರಾಯಣಖೇಡ್ ಶಾಸಕ ಪಿ.ಸಂಜೀವ ರೆಡ್ಡಿ ಮಾತನಾಡಿ, ಕಂದಾಯ ವಿಭಾಗಾಧಿಕಾರಿ (ಆರ್ಡಿಒ) ಅಶೋಕ್ ಚಕ್ರವರ್ತಿ, ಆಸ್ಪತ್ರೆ ಸೇವೆಗಳ ಜಿಲ್ಲಾ ಸಂಯೋಜಕ (ಡಿಸಿಎಚ್ಎಸ್), ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಡಿಎಂಎಚ್ಒ) ಡಾ.ಗಾಯತ್ರಿದೇವಿ ಮತ್ತು ಉಪ ಡಿಎಂಎಚ್ಒ ಡಾ.ಸಂಧ್ಯಾರಾಣಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ವೈದ್ಯಕೀಯ ಶಿಬಿರ ಏರ್ಪಡಿಸಲಾಗಿದೆ. ಶುದ್ಧ ಕುಡಿಯುವ ನೀರನ್ನ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…