ಬಹುತೇಕ ಗ್ರಾಮೀಣ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧೀಕರಿಸಿದ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ತೆಲಂಗಾಣ ರಾಜ್ಯದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿದ್ದು, ಸುಮಾರು 80 ಮಂದಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮಂಡಲದ ಸಂಜೀವರಾವ್ಪೇಟೆಯ ಬಾವಿಯ ಕಲುಷಿತ ನೀರನ್ನು ಸೇವಿಸಿದ್ದರಿಂದ ಈ ಘಟನೆ ನಡೆದಿದೆ.
ಮಿಷನ್ ಭಗೀರಥ ಯೋಜನೆ ಮೂಲಕ ನೀರು ಪೂರೈಕೆಯಲ್ಲಿ ನಿರಂತರ ಅಡಚಣೆಯ ನಂತರ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಸಂಜೀವರಾವ್ ಪೇಟೆಯ ಎರಡು ಕಾಲೋನಿಗಳ ನಿವಾಸಿಗಳು ಮಿಷನ್ ಭಗೀರಥ ಯೋಜನೆಯ ಮೂಲಕ ನೀರು ಪೂರೈಕೆಯಲ್ಲಿ ವ್ಯತ್ಯಯವಾದ ನಂತರ ಬಾವಿಯ ನೀರನ್ನು ಆಶ್ರಯಿಸಿದ್ದಾರೆ.
ಬಾವಿಯಲ್ಲಿನ ನೀರು ಕಲುಷಿತಗೊಂಡಿದೆ ಎಂದು ವರದಿಗಳು ಹೇಳಿವೆ. ಆದರೆ ಬೇರೆ ದಾರಿಯಿಲ್ಲದೇ ಬಾವಿಯ ನೀರನ್ಮುನು ಸೇವಿಸಿದ ಎಲ್ಲರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ.
ಮಹೇಶ್ (22) ಮತ್ತು ಸಾಯಮ್ಮ (70) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ. ಅಸ್ವಸ್ಥರಾದ 50 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಬ್ಬರನ್ನು ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಗೆ, ಇಬ್ಬರನ್ನು ನಾರಾಯಣಖೇಡ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗ್ರಾಮಸ್ಥರ ಪ್ರಕಾರ, ಗ್ರಾಮದಲ್ಲಿ ಮೂರು ಟ್ಯಾಂಕ್ಗಳಿದ್ದವು, ಮಿಷನ್ ಭಗೀರಥ ಯೋಜನೆಗೆ ಎರಡು ಟ್ಯಾಂಕ್ಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಹಳೆಯ ಟ್ಯಾಂಕ್ಗೆ ಬಾವಿಗೆ ಸಂಪರ್ಕ ಕಲ್ಪಿಸಲಾಗಿದೆ. ಎರಡು ಬಿ.ಸಿ ಕಾಲೋನಿಗಳ ನಿವಾಸಿಗಳು ಬಾವಿ ನೀರಿನ ಟ್ಯಾಂಕ್ ಮೂಲಕ ಸರಬರಾಜು ಮಾಡಿದ ನೀರನ್ನು ಕುಡಿದು ಅಸ್ವಸ್ಥರಾದರು ಎಂದಿದ್ದಾರೆ.
ನಾರಾಯಣಖೇಡ್ ಶಾಸಕ ಪಿ.ಸಂಜೀವ ರೆಡ್ಡಿ ಮಾತನಾಡಿ, ಕಂದಾಯ ವಿಭಾಗಾಧಿಕಾರಿ (ಆರ್ಡಿಒ) ಅಶೋಕ್ ಚಕ್ರವರ್ತಿ, ಆಸ್ಪತ್ರೆ ಸೇವೆಗಳ ಜಿಲ್ಲಾ ಸಂಯೋಜಕ (ಡಿಸಿಎಚ್ಎಸ್), ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಡಿಎಂಎಚ್ಒ) ಡಾ.ಗಾಯತ್ರಿದೇವಿ ಮತ್ತು ಉಪ ಡಿಎಂಎಚ್ಒ ಡಾ.ಸಂಧ್ಯಾರಾಣಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ವೈದ್ಯಕೀಯ ಶಿಬಿರ ಏರ್ಪಡಿಸಲಾಗಿದೆ. ಶುದ್ಧ ಕುಡಿಯುವ ನೀರನ್ನ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…