ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು. ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸಬೇಕು. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.
ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯದ ಇತರೆ ಜಿಲ್ಲೆಗಳ ಅಭಿವೃದ್ಧಿ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…