ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು. ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸಬೇಕು. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.
ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯದ ಇತರೆ ಜಿಲ್ಲೆಗಳ ಅಭಿವೃದ್ಧಿ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…