Categories: ರಾಜ್ಯ

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

22 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

24 hours ago