Categories: ರಾಜ್ಯ

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 hour ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

9 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

22 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

22 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago