ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.
ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ, ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…