Categories: ರಾಜ್ಯ

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago