Categories: ರಾಜ್ಯ

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago